ಬ್ರೇಕಿಂಗ್ ನ್ಯೂಸ್
21-07-23 07:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಮಂಗಳೂರು ನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆಸಿ ರೋಡಿನ ನಿಶಾದ್ (31), ಮಹಮ್ಮದ್ ರಜೀನ್ (24) ಬಂಧಿತರು. ಕೇರಳದ ಗಡಿಭಾಗ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಸಿಲ್ವರ್ ಮತ್ತು ಕಪ್ಪು ಬಣ್ಣದ ಎರಡು ಸ್ವಿಫ್ಟ್ ಕಾರಿನಲ್ಲಿದ್ದುಕೊಂಡು ಎಂಡಿಎಂಎ ಡ್ರಗ್ಸ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ 9 ಲಕ್ಷ ಮೌಲ್ಯದ 180 ಗ್ರಾಮ್ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಎರಡು ಮಾರುತಿ ಸ್ವಿಫ್ಟ್ ಕಾರು, ನಾಲ್ಕು ಮೊಬೈಲ್ ಫೋನ್, 22 ಸಾವಿರ ರೂ. ನಗದು, ಒಂದು ಪಿಸ್ತೂಲ್, ಒಂದು ಸಜೀವ ಗುಂಡು, ಎರಡು ಡ್ರಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮೂವರು ಡ್ರಗ್ ಕಿಂಗ್ ಪಿನ್ ಗಳಲ್ಲಿ ಒಬ್ಬ
ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಜ್ ಮಂಗಳೂರು ಮಹಾನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಸುವ ಮೂವರು ಕಿಂಗ್ ಪಿನ್ ಗಳ ಪೈಕಿ ಒಬ್ಬನಾಗಿದ್ದು ಈತನ ಬಂಧನಕ್ಕಾಗಿ ಪೊಲೀಸರು ಹಲವು ಸಮಯದಿಂದ ಹೊಂಚು ಹಾಕಿದ್ದರು. ಆದರೆ ಮೊಬೈಲ್ ಫೋನಲ್ಲಿ ವಾಟ್ಸಪ್ ಕರೆ ಮಾತ್ರ ಮಾಡುವುದು, ಒಂದು ಕಡೆಗೆ ಹೋದ ದಿನ ಮತ್ತೆ ಹೋಗದೇ ಇರುವುದು, ಹೀಗೆ ಪೊಲೀಸರು ಬೆನ್ನು ಬಿದ್ದಾಗ ಕೈಗೆ ಸಿಗದೆ ತಲೆಮರೆಸಿಕೊಳ್ಳುತ್ತಿದ್ದ. ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಹಂಚಿಕೆ ಮಾಡುತ್ತಿದ್ದವರಲ್ಲಿ ಈತನೂ ಒಬ್ಬನಾಗಿದ್ದ.
ಈ ಹಿಂದೆ ಮಂಗಳೂರಿನ ಉರ್ವಾ ಠಾಣೆಯ ಎಎಸ್ಐಗೆ ಚೂರಿಯಿಂದ ಇರಿದು ಹಲ್ಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿಗೆ ಹಲ್ಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಸೈಬರ್ ಕ್ರೈಂ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣೆಯಲ್ಲಿ ಎರಡು ದರೋಡೆ ಪ್ರಕರಣ, ಮಂಗಳೂರಿನ ಕಂಕನಾಡಿ ನಗರ, ಕೊಣಾಜೆ ಠಾಣೆ ಸೇರಿದಂತೆ ಮೊಹಮ್ಮದ್ ನಿಯಾಜ್ ಹತ್ತು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಹಲವು ಕೋರ್ಟ್ ವಾರೆಂಟ್ ಗಳಿದ್ದರೂ, ಪೊಲೀಸರ ತಲೆತಪ್ಪಿಸಿಕೊಂಡು ಆಯಕಟ್ಟಿನ ಪೆಡ್ಲರ್ ಗಳಿಗೆ ಡ್ರಗ್ ಪೂರೈಸುತ್ತಿದ್ದ. ನಿಯಾಜ್ ಜೊತೆಗಿದ್ದ ಇನ್ನಿಬ್ಬರು ಪ್ರಮುಖ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Three drug peddlers were arrested by Mangaluru city crime branch police. MDMA, pistol and many other items were seized from them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm