ಬ್ರೇಕಿಂಗ್ ನ್ಯೂಸ್
25-07-23 04:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 25: ಇತ್ತೀಚೆಗೆ ಹೊಸಬೆಟ್ಟು ಬಳಿಯ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಳಿಗೆಯಿಂದ ಎರಡು ಕಾರುಗಳನ್ನು ಕಳವುಗೈದ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 12ರಂದು ರಾತ್ರಿ ಹೊಸಬೆಟ್ಟಿನ ಕಾರು ಮಾರ್ಟ್ ನಲ್ಲಿ ಕಳವು ಕೃತ್ಯ ನಡೆದಿತ್ತು. ಆರೋಪಿಗಳು ರೇನ್ ಕೋಟ್ ಧರಿಸಿ ಕಚೇರಿಯ ಒಳನುಗ್ಗಿದ್ದು ಬಳಿಕ ಡ್ರಾವರ್ ನಿಂದ ಕೀ ಪಡೆದು ಕ್ರೆಟಾ ಮತ್ತು ಸ್ವಿಫ್ಟ್ ಕಾರನ್ನು ಎಗರಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಕಾರು ಮಳಿಗೆಯ ಮಾಲಕ ಅಬೀದ್ ಅಹ್ಮದ್ ಸೂರಲ್ಪಾಡಿ, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಕಳವಾದ ಕಾರುಗಳ ಪತ್ತೆಗಾಗಿ ಪೊಲೀಸರು ಜುಲೈ 22ರಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಅಪ್ರಾಪ್ತ ಯುವಕನೊಬ್ಬ ಕಾರು ಚಲಾಯಿಸಿಕೊಂಡು ಬಂದು ಸಿಕ್ಕಿಬಿದ್ದಿದ್ದ. ತಪಾಸಣೆ ವೇಳೆ ಕಳವುಗೈದ ಕಾರು ಎಂದು ತಿಳಿದುಬಂದಿದ್ದು ಇನ್ನೊಬ್ಬ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆತ ನೀಡಿದ ಮಾಹಿತಿಯಂತೆ ಕಿನ್ನಿಪದವು ನಿವಾಸಿ ಮಹಮ್ಮದ್ ಶಫೀಕ್ (21) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಕಡದಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಶಫೀಕ್ ನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಕಳವುಗೈದು ತೊಕ್ಕೊಟ್ಟು ಬಸ್ ನಿಲ್ದಾಣ ಬಳಿ ಇರಿಸಿದ್ದ ಕ್ರೆಟಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಉಪಯೋಗಿಸಿದ್ದ ಸುತ್ತಿಗೆ, ರೇನ್ ಕೋಟ್ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಶಫೀಕ್ ಒಂದು ವರ್ಷದ ಹಿಂದೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಕೆಸರುಗದ್ದೆ ಎಂಬಲ್ಲಿ ಮನೆಯಿಂದ ದ್ವಿಚಕ್ರ ವಾಹನ ಕಳವುಗೈದಿದ್ದು ಅದನ್ನೂ ವಶಕ್ಕೆ ಪಡೆಯಲಾಗಿದೆ. ಒಟ್ಟು ವಶಕ್ಕೆ ಪಡೆದ ವಾಹನಗಳ ಮೌಲ್ಯ 15 ಲಕ್ಷ ಆಗಿರುತ್ತದೆ. ಆರೋಪಿ ಶಫೀಕ್ ನನ್ನು ಪೊಲೀಸರು ಕೋರ್ಟಿಗೆ ಹಾಜರು ಪಡಿಸಿ ಮೂರು ದಿನ ಕಸ್ಟಡಿಗೆ ಪಡೆದಿದ್ದಾರೆ. ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
Mangalore second hand car robbery, Police swift action two arrested including Minor by Surathkal Inspector Mahesh Prasad. The thieves were arrested for stealing two cars and other valuables from the used car showroom at Suratkal on July 12.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm