ಬ್ರೇಕಿಂಗ್ ನ್ಯೂಸ್
27-07-23 08:36 pm HK News Desk ಕ್ರೈಂ
ಪುಣೆ, ಜುಲೈ 27: ಪಡೆದ ಸಾಲವನ್ನು ಮರಳಿಸದೆ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು, 47 ವರ್ಷದ ಸಾಲದಾತನೊಬ್ಬ ವ್ಯಕ್ತಿಯ ಎದುರೇ ಆತನ ಹೆಂಡತಿಯನ್ನು ಅತ್ಯಾಚಾರದ ಎಸಗಿದ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
34 ವರ್ಷದ ಮಹಿಳೆ ಮೇಲೆ ಭಯಾನಕ ಕೃತ್ಯವು ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಹದಾಸ್ಪರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲೇವಾದೇವಿ ವಹಿವಾಟು ನಡೆಸುವ ಇಮ್ತಿಯಾಜ್ ಶೇಖ್ ಎಂಬ ವ್ಯಕ್ತಿಯಿಂದ ಸಂತ್ರಸ್ತೆಯ ಗಂಡ, ಫೆಬ್ರವರಿಯಲ್ಲಿ ಬಡ್ಡಿರಹಿತ 40 ಸಾವಿರ ರೂ ಹಣ ಸಾಲ ಪಡೆದಿದ್ದ. ಆದರೆ ಅದನ್ನು ಮರಳಿ ಪಾವತಿಸಲು ಆತನಿಗೆ ಸಾಧ್ಯವಾಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಶೇಖ್, ದಂಪತಿಯನ್ನು ಹಲವು ಬಾರಿ ಅವಾಚ್ಯವಾಗಿ ನಿಂದಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಲದ ಹಣ ವಾಪಸ್ ಕೇಳಿದರೂ, ಪಾವತಿಸದಿದ್ದರಿಂದ ಕೋಪಗೊಂಡಿದ್ದ ಆರೋಪಿ, ತನ್ನ ಕೃತ್ಯಕ್ಕೆ ಮೊದಲೇ ಸಂಚು ರೂಪಿಸಿದ್ದ. ಹದಾಸ್ಪುರ ಗವರ್ನ್ಮೆಂಟ್ ಕಾಲೊನಿಯಲ್ಲಿ ಯಾರೂ ಇಲ್ಲದ ಸ್ಥಳಕ್ಕೆ ದಂಪತಿಯನ್ನು ಕರೆಸಿಕೊಂಡಿದ್ದ ಶೇಖ್, ಬಾಕಿ ಉಳಿದ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದ. ಅವರ ಬಳಿ ಹಣ ಇರಲಿಲ್ಲ. ತನ್ನ ಬಳಿ ಇದ್ದ ಚಾಕು ಹೊರಗೆ ತೆಗೆದಿದ್ದ ಶೇಖ್, ಸಂತ್ರಸ್ತೆಯ ಗಂಡನಿಗೆ ಚಾಕು ತೋರಿಸಿ ಬೆದರಿಸಿ, ಬಳಿಕ ಆತನ ಎದುರೇ ಮಹಿಳೆ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ತನ್ನ ಅತ್ಯಾಚಾರದ ಕೃತ್ಯವನ್ನು ಆತ ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ್ದ. ಇದಾದ ಬಳಿಕವೂ ತನಗೆ ಲೈಂಗಿಕ ಸುಖ ನೀಡುವಂತೆ ಮಹಿಳೆಯನ್ನು ಪದೇ ಪದೇ ಪೀಡಿಸಲು ಆರಂಭಿಸಿದ್ದ. ಅದಕ್ಕೆ ಆಕೆ ನಿರಾಕರಿಸಿದ್ದಳು. ಇದರಿಂದ ಕುದ್ದು ಹೋಗಿದ್ದ ಆತ, ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ತಾನು ಚಿತ್ರೀಕರಿಸಿದ್ದ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A 47-year-old moneylender in Maharashtra's Pune city allegedly raped a woman after her husband failed to repay the loan taken from him, police said today. The incident took place in February this year and the accused has been arrested, a police official said.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm