ಬ್ರೇಕಿಂಗ್ ನ್ಯೂಸ್
27-07-23 08:36 pm HK News Desk ಕ್ರೈಂ
ಪುಣೆ, ಜುಲೈ 27: ಪಡೆದ ಸಾಲವನ್ನು ಮರಳಿಸದೆ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು, 47 ವರ್ಷದ ಸಾಲದಾತನೊಬ್ಬ ವ್ಯಕ್ತಿಯ ಎದುರೇ ಆತನ ಹೆಂಡತಿಯನ್ನು ಅತ್ಯಾಚಾರದ ಎಸಗಿದ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
34 ವರ್ಷದ ಮಹಿಳೆ ಮೇಲೆ ಭಯಾನಕ ಕೃತ್ಯವು ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಹದಾಸ್ಪರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲೇವಾದೇವಿ ವಹಿವಾಟು ನಡೆಸುವ ಇಮ್ತಿಯಾಜ್ ಶೇಖ್ ಎಂಬ ವ್ಯಕ್ತಿಯಿಂದ ಸಂತ್ರಸ್ತೆಯ ಗಂಡ, ಫೆಬ್ರವರಿಯಲ್ಲಿ ಬಡ್ಡಿರಹಿತ 40 ಸಾವಿರ ರೂ ಹಣ ಸಾಲ ಪಡೆದಿದ್ದ. ಆದರೆ ಅದನ್ನು ಮರಳಿ ಪಾವತಿಸಲು ಆತನಿಗೆ ಸಾಧ್ಯವಾಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಶೇಖ್, ದಂಪತಿಯನ್ನು ಹಲವು ಬಾರಿ ಅವಾಚ್ಯವಾಗಿ ನಿಂದಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಲದ ಹಣ ವಾಪಸ್ ಕೇಳಿದರೂ, ಪಾವತಿಸದಿದ್ದರಿಂದ ಕೋಪಗೊಂಡಿದ್ದ ಆರೋಪಿ, ತನ್ನ ಕೃತ್ಯಕ್ಕೆ ಮೊದಲೇ ಸಂಚು ರೂಪಿಸಿದ್ದ. ಹದಾಸ್ಪುರ ಗವರ್ನ್ಮೆಂಟ್ ಕಾಲೊನಿಯಲ್ಲಿ ಯಾರೂ ಇಲ್ಲದ ಸ್ಥಳಕ್ಕೆ ದಂಪತಿಯನ್ನು ಕರೆಸಿಕೊಂಡಿದ್ದ ಶೇಖ್, ಬಾಕಿ ಉಳಿದ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದ. ಅವರ ಬಳಿ ಹಣ ಇರಲಿಲ್ಲ. ತನ್ನ ಬಳಿ ಇದ್ದ ಚಾಕು ಹೊರಗೆ ತೆಗೆದಿದ್ದ ಶೇಖ್, ಸಂತ್ರಸ್ತೆಯ ಗಂಡನಿಗೆ ಚಾಕು ತೋರಿಸಿ ಬೆದರಿಸಿ, ಬಳಿಕ ಆತನ ಎದುರೇ ಮಹಿಳೆ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ತನ್ನ ಅತ್ಯಾಚಾರದ ಕೃತ್ಯವನ್ನು ಆತ ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ್ದ. ಇದಾದ ಬಳಿಕವೂ ತನಗೆ ಲೈಂಗಿಕ ಸುಖ ನೀಡುವಂತೆ ಮಹಿಳೆಯನ್ನು ಪದೇ ಪದೇ ಪೀಡಿಸಲು ಆರಂಭಿಸಿದ್ದ. ಅದಕ್ಕೆ ಆಕೆ ನಿರಾಕರಿಸಿದ್ದಳು. ಇದರಿಂದ ಕುದ್ದು ಹೋಗಿದ್ದ ಆತ, ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ತಾನು ಚಿತ್ರೀಕರಿಸಿದ್ದ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A 47-year-old moneylender in Maharashtra's Pune city allegedly raped a woman after her husband failed to repay the loan taken from him, police said today. The incident took place in February this year and the accused has been arrested, a police official said.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am