ಬ್ರೇಕಿಂಗ್ ನ್ಯೂಸ್
29-07-23 10:56 pm HK News Desk ಕ್ರೈಂ
ಉಳ್ಳಾಲ, ಜು.29: ಫ್ಲೈಯಿಂಗ್ ಕಿಸ್ ಕೊಟ್ಟು ವಿದ್ಯಾರ್ಥಿನಿಯಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ಮ ಗ್ರಾಮದ ನಿವಾಸಿ ಆಟೋ ಚಾಲಕ ಇಕ್ಬಾಲ್ (37)ಬಂಧಿತ ಆರೋಪಿ. ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಎಸ್ಸೆಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ ಜೂನ್ ತಿಂಗಳಲ್ಲಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು.. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದು ಬಾಲಕಿಯ ಕೈ, ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ಮನೆಮಂದಿಗೆ ವಿಚಾರ ತಿಳಿಸಿದ್ದಳು.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಕೊಣಾಜೆ ಠಾಣೆಯಲ್ಲಿ ಆರೋಪಿ ಇಕ್ಬಾಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಇಕ್ಬಾಲನನ್ನ ಪೊಲೀಸರು ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Auto Driver Sexual harassing Minor school student of flying kiss at Konaje, accused arrested by Mangalore Police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm