ಬ್ರೇಕಿಂಗ್ ನ್ಯೂಸ್
31-07-23 05:13 pm HK News Desk ಕ್ರೈಂ
ಮುಂಬೈ, ಜುಲೈ 31: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆಯೊಬ್ಬರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಪಿಎಫ್ ಎಎಸ್ಐ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಆರ್ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಮುಂಬೈ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಾಪಿ ರೈಲು ನಿಲ್ದಾಣ ಹಾಗೂ ಬೋರಿವಲಿ ರೈಲು ನಿಲ್ದಾಣದ ಮಧ್ಯೆ ರೈಲು ಸಂಚರಿಸುತ್ತಿದ್ದಾಗ ಆರ್ಪಿಎಫ್ ಪೇದೆಯು ಎಎಸ್ಐ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಾದ ಬಳಿಕ ಮೂವರು ಪ್ರಯಾಣಿಕರ ಮೇಲೂ ಆತ ಗುಂಡಿನ ದಾಳಿ ನಡೆಸಿದ್ದಾರೆ. ಮೃತ ಎಎಸ್ಐ ಅವರನ್ನು ಟೀಕಾ ಶರ್ಮಾ ಎಂಬುದಾಗಿ ಗುರುತಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


ಜೈಪುರ ಎಕ್ಸ್ಪ್ರೆಸ್ ರೈಲಿನ ಬಿ 5 ಬೋಗಿಯಲ್ಲಿ ಪೇದೆಯು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. “ರೈಲ್ವೆ ರಕ್ಷಣಾ ಪಡೆ ಪೇದೆಯು ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಎಎಸ್ಐ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಆರ್ಪಿಎಫ್ ತಿಳಿಸಿದೆ.
ಚೇತನ್ ಸಿಂಗ್ ಅವರನ್ನು ಎಸ್ಕಾರ್ಟ್ಗಾಗಿ ನಿಯೋಜಿಸಲಾಗಿತ್ತು. ಅವರೇಕೆ ತಮ್ಮ ಸರ್ವಿಸ್ ಗನ್ ತೆಗೆದು ಗುಂಡಿನ ದಾಳಿ ನಡೆಸಿದರು ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಮಾಡುತ್ತಲೇ ಆತ ರೈಲಿನಿಂದ ಹೊರಗೆ ಜಿಗಿದಿದ್ದಾರೆ. ಬಳಿಕ ಆರ್ಪಿಎಫ್ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
A Railway Protection Force (RPF) jawan shot dead four people on board a train from Jaipur to Mumbai. The victims included three passengers and a RPF Assistant Sub-Inspector (ASI). Railway Protection Force Constable Chetan shot all four victims. The incident happened around 5 am on Monday between Vapi to Borivali to Mira Road station. The accused constable has been detained by Mumbai Railway Police.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm