ಬ್ರೇಕಿಂಗ್ ನ್ಯೂಸ್
31-07-23 05:13 pm HK News Desk ಕ್ರೈಂ
ಮುಂಬೈ, ಜುಲೈ 31: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆಯೊಬ್ಬರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಪಿಎಫ್ ಎಎಸ್ಐ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಆರ್ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಮುಂಬೈ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಾಪಿ ರೈಲು ನಿಲ್ದಾಣ ಹಾಗೂ ಬೋರಿವಲಿ ರೈಲು ನಿಲ್ದಾಣದ ಮಧ್ಯೆ ರೈಲು ಸಂಚರಿಸುತ್ತಿದ್ದಾಗ ಆರ್ಪಿಎಫ್ ಪೇದೆಯು ಎಎಸ್ಐ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಾದ ಬಳಿಕ ಮೂವರು ಪ್ರಯಾಣಿಕರ ಮೇಲೂ ಆತ ಗುಂಡಿನ ದಾಳಿ ನಡೆಸಿದ್ದಾರೆ. ಮೃತ ಎಎಸ್ಐ ಅವರನ್ನು ಟೀಕಾ ಶರ್ಮಾ ಎಂಬುದಾಗಿ ಗುರುತಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


ಜೈಪುರ ಎಕ್ಸ್ಪ್ರೆಸ್ ರೈಲಿನ ಬಿ 5 ಬೋಗಿಯಲ್ಲಿ ಪೇದೆಯು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. “ರೈಲ್ವೆ ರಕ್ಷಣಾ ಪಡೆ ಪೇದೆಯು ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಎಎಸ್ಐ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಆರ್ಪಿಎಫ್ ತಿಳಿಸಿದೆ.
ಚೇತನ್ ಸಿಂಗ್ ಅವರನ್ನು ಎಸ್ಕಾರ್ಟ್ಗಾಗಿ ನಿಯೋಜಿಸಲಾಗಿತ್ತು. ಅವರೇಕೆ ತಮ್ಮ ಸರ್ವಿಸ್ ಗನ್ ತೆಗೆದು ಗುಂಡಿನ ದಾಳಿ ನಡೆಸಿದರು ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಮಾಡುತ್ತಲೇ ಆತ ರೈಲಿನಿಂದ ಹೊರಗೆ ಜಿಗಿದಿದ್ದಾರೆ. ಬಳಿಕ ಆರ್ಪಿಎಫ್ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
A Railway Protection Force (RPF) jawan shot dead four people on board a train from Jaipur to Mumbai. The victims included three passengers and a RPF Assistant Sub-Inspector (ASI). Railway Protection Force Constable Chetan shot all four victims. The incident happened around 5 am on Monday between Vapi to Borivali to Mira Road station. The accused constable has been detained by Mumbai Railway Police.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm