ಬ್ರೇಕಿಂಗ್ ನ್ಯೂಸ್
31-07-23 05:13 pm HK News Desk ಕ್ರೈಂ
ಮುಂಬೈ, ಜುಲೈ 31: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆಯೊಬ್ಬರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಪಿಎಫ್ ಎಎಸ್ಐ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಆರ್ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಮುಂಬೈ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಾಪಿ ರೈಲು ನಿಲ್ದಾಣ ಹಾಗೂ ಬೋರಿವಲಿ ರೈಲು ನಿಲ್ದಾಣದ ಮಧ್ಯೆ ರೈಲು ಸಂಚರಿಸುತ್ತಿದ್ದಾಗ ಆರ್ಪಿಎಫ್ ಪೇದೆಯು ಎಎಸ್ಐ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಾದ ಬಳಿಕ ಮೂವರು ಪ್ರಯಾಣಿಕರ ಮೇಲೂ ಆತ ಗುಂಡಿನ ದಾಳಿ ನಡೆಸಿದ್ದಾರೆ. ಮೃತ ಎಎಸ್ಐ ಅವರನ್ನು ಟೀಕಾ ಶರ್ಮಾ ಎಂಬುದಾಗಿ ಗುರುತಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


ಜೈಪುರ ಎಕ್ಸ್ಪ್ರೆಸ್ ರೈಲಿನ ಬಿ 5 ಬೋಗಿಯಲ್ಲಿ ಪೇದೆಯು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. “ರೈಲ್ವೆ ರಕ್ಷಣಾ ಪಡೆ ಪೇದೆಯು ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಎಎಸ್ಐ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಆರ್ಪಿಎಫ್ ತಿಳಿಸಿದೆ.
ಚೇತನ್ ಸಿಂಗ್ ಅವರನ್ನು ಎಸ್ಕಾರ್ಟ್ಗಾಗಿ ನಿಯೋಜಿಸಲಾಗಿತ್ತು. ಅವರೇಕೆ ತಮ್ಮ ಸರ್ವಿಸ್ ಗನ್ ತೆಗೆದು ಗುಂಡಿನ ದಾಳಿ ನಡೆಸಿದರು ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಮಾಡುತ್ತಲೇ ಆತ ರೈಲಿನಿಂದ ಹೊರಗೆ ಜಿಗಿದಿದ್ದಾರೆ. ಬಳಿಕ ಆರ್ಪಿಎಫ್ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
A Railway Protection Force (RPF) jawan shot dead four people on board a train from Jaipur to Mumbai. The victims included three passengers and a RPF Assistant Sub-Inspector (ASI). Railway Protection Force Constable Chetan shot all four victims. The incident happened around 5 am on Monday between Vapi to Borivali to Mira Road station. The accused constable has been detained by Mumbai Railway Police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm