ಬ್ರೇಕಿಂಗ್ ನ್ಯೂಸ್
31-07-23 07:26 pm Mangalore Correspondent ಕ್ರೈಂ
ಮಂಗಳೂರು, ಜುಲೈ 31: ತಾನೊಬ್ಬ ಪತ್ರಕರ್ತ ಎಂದು ಹೇಳಿದರೂ, ಕೇಳದೆ ಯುವಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ. ದೈಜಿವರ್ಲ್ಡ್ ಸುದ್ದಿ ಸಂಸ್ಥೆಯ ವರದಿಗಾರ ಅಭಿಜಿತ್ ಕೊಲ್ಪೆ ಅವರನ್ನು ನೀನು ಬ್ಯಾರಿಯೆಂದು ಹೇಳಿ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.
ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ದೈಜಿ ವರ್ಲ್ಡ್ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.
ಆನಂತರ, ಕಾರು ಒಂದರಲ್ಲಿ ಆರೋಪಿಗಳು ಜಾಗ ಖಾಲಿ ಮಾಡಿದ್ದರು. ಕಾವೂರು ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Moral Policing on Daijiworld Media Journalist Abhijith Kolpe at Kavoor in Mangalore. Two Hindu activists have been arrested. Journalist Abhijith Kolpe was harassed while walking to a restaurant with a companion. He was told he was a Muslim man and asked why a Hindu female was with him. He claimed that he is not a Muslim, but the two still harassed him.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm