ಬ್ರೇಕಿಂಗ್ ನ್ಯೂಸ್
01-08-23 04:12 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 1: ರಾಜಧಾನಿಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮೇಲೆ ಕಳೆದ ಒಂದು ವರ್ಷದಿಂದ ಅತ್ಯಾಚಾರ ನಡೆಸಲಾಗಿತ್ತು. ಸಂತ್ರಸ್ತೆ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಆ್ಯಂಡಿ ಜಾರ್ಜ್, ಸಂತೋಷ್, ಶಶಿ ಬಂಧಿತ ಆರೋಪಿಗಳು. ಎ1 ಆರೋಪಿ ಆ್ಯಂಡಿ ಜಾರ್ಜ್ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಟೀಚರ್ ಆಗಿ ಕೆಲಸ ಮಾಡಿಕೊಂಡಿದ್ದನು. ಬಂಧಿತರಿಂದ ಮೊಬೈಲ್, ಪೆನ್ ಡ್ರೈವ್ ಹಾಗೂ ಲ್ಯಾಪ್ಟ್ಯಾಪ್ ವಶಕ್ಕೆ ಪಡೆಯಲಾಗಿದೆ.
ಎರಡು ವರ್ಷಗಳ ಹಿಂದೆ ಎ1 ಆರೋಪಿ ಆ್ಯಂಡಿ ಜಾರ್ಜ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿದ್ಯಾರ್ಥಿನಿಯ ಪರಿಚಯ ಆಗಿತ್ತು. ನಂತರ ಪ್ರೀತಿಸುವುದಾಗಿ ಹೇಳಿ ಹಲವು ಕಡೆಗಳಲ್ಲಿ ಸಂತ್ರಸ್ತೆ ಜೊತೆ ಸುತ್ತಾಡಿದ್ದಾನೆ. ಈ ವೇಳೆ ಕೆಲವು ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸೆರೆ ಹಿಡಿದುಕೊಂಡಿದ್ದನು.

ವಿಡಿಯೋ, ಫೋಟೋ ತೋರಿಸಿ ಬ್ಲ್ಯಾಕ್ಮೇಲ್ ;
ನಂತರ ಅದೇ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ತನ್ನ ಇಬ್ಬರು ಸ್ನೇಹಿತರ ಜೊತೆಗೂಡಿ ನಿರಂತರವಾಗಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೂವರ ಚಿತ್ರಹಿಂಸೆ ತಾಳಲಾರದೇ ಕೊನೆಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
![]()
ಹಲವರಿಗೆ ವಂಚನೆ ಮಾಡಿರುವ ಆರೋಪಿಗಳು ;
ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಕೊಡಿಗೇಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಮೊಬೈಲ್ ಹಾಗೂ ಲ್ಯಾಪ್ಟಾಪ್ನಲ್ಲಿ ಹಲವು ಫೋಟೋ ಮತ್ತು ವಿಡಿಯೋಗಳು ಲಭ್ಯವಾಗಿವೆ. ಇದೇ ರೀತಿ ಹಲವರಿಗೆ ವಂಚನೆ ಮಾಡಿರೋದು ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನೊಂದ ಮಹಿಳೆ ಮತ್ತು ಆರೋಪಿ ಆ್ಯಂಡಿ ಜಾರ್ಜ್ ಇಬ್ಬರಿಗೂ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿತ್ತು. ಎ1 ಆರೋಪಿ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಟೀಚರ್ ಆಗಿದ್ದಾನೆ. ಕಾಲೇಜಿನಲ್ಲಿ ಇದೇ ರೀತಿ ವಿದ್ಯಾರ್ಥಿನಿಯರಿಗೆ ಮೋಸ ಮಾಡಿದ್ದನಾ ಎಂಬುದರ ಬಗ್ಗೆಯೂ ತನಿಖೆ ನಡೆಲಾಗುತ್ತಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
The Bengaluru police Monday arrested a 28- year-old dance teacher for allegedly blackmailing his 23-year-old ex-girlfriend and raping her several times over the last six months along with two of his friends. The arrested have been identified as Andy George, the dance teacher, Santosh, 28, and Shashi Kumar, 30.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm