ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm