ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm