ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm