ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm