ಬ್ರೇಕಿಂಗ್ ನ್ಯೂಸ್
05-11-20 06:08 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 05: ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕ ಸಿದ್ಧಾರ್ಥ್ ಸೇರಿ ಕಾಫಿ ಡೇ ಕಂಪನಿಯ ಸೇರಿ 8 ಜನರಿಗೆ ಮೂಡಿಗೆರೆ ಜೆಎಂಎಫ್ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ 300ಕ್ಕೂ ಹೆಚ್ಚು ಬೆಳೆಗಾರರಿಗೆ 100 ಕೋಟಿಗೂ ಅಧಿಕ ಹಣವನ್ನು ಎಬಿಸಿ ಕಂಪೆನಿ ಬಾಕಿ ಉಳಿಸಿಕೊಂಡಿದ್ದು ಇದರ ವಿರುದ್ಧ ಕಾಫಿ ಬೆಳೆಗಾರ ನಂದೀಶ್ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್, ಪ್ರತಿ ವರ್ಷ ಕಾಫಿಯನ್ನು ಎಬಿಸಿ ಕಂಪೆನಿಗೆ ನೀಡುತ್ತಿದ್ದರು. ಆದರೆ, ಸಿದ್ಧಾರ್ಥ್ ನಿಧನರಾದ ಬಳಿಕ ಬೆಳೆಗಾರರಿಗೆ ಕಂಪೆನಿಯಿಂದ ಬರುತ್ತಿದ್ದ ಹಣ ನಿಂತು ಹೋಗಿದೆ. ನಂದೀಶ್ ಪೋಸ್ಟ್ ಡೇಟೆಡ್ ಚೆಕ್ ಪಡೆದು ಹಣ ನಗದು ಮಾಡಿಕೊಳ್ಳುತ್ತಿದ್ದರು. ಅದರಂತೆ, ನಂದೀಶ್ ಹತ್ತು ಚೆಕ್ ಪಡೆದಿದ್ದು ಅದನ್ನು ಬ್ಯಾಂಕಿಗೆ ಹಾಕಿದಾಗ ಬೌನ್ಸ್ ಆಗಿತ್ತು.
ಚೆಕ್ ಬೌನ್ಸ್ ಹಿನ್ನೆಲೆಯಲ್ಲಿ ನಂದೀಶ್ ತನಗೆ ಬರಬೇಕಿದ್ದ 45.38 ಲಕ್ಷ ಹಣಕ್ಕಾಗಿ ಕೋರ್ಟಿಗೆ ದೂರು ಸಲ್ಲಿಸಿದ್ದರು. ಕಳೆದ ಅಕ್ಟೋಬರ್ 6ರಂದು ಎಬಿಸಿ ಕಂಪೆನಿ ಕಡೆಯಿಂದ ನಿರ್ದೇಶಕರು ಕೋರ್ಟಿಗೆ ಹಾಜರಾಗಬೇಕಿತ್ತು. ಹೀಗಾಗಿ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ನ.11ಕ್ಕೆ ಇದ್ದು ಅದಕ್ಕೆ ಮುನ್ನ ಆರೋಪಿಗಳು ಕೋರ್ಟಿಗೆ ಹಾಜರಾಗಬೇಕೆಂದು ನಂದೀಶ್ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಬಗ್ಗೆ ಕಾಫಿ ಡೇ ಕಂಪನಿಯ ಕಡೆಯಿಂದ ಸ್ಪಷ್ಟನೆ ನೀಡಲಾಗಿದ್ದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ 1020 ಬೆಳೆಗಾರರಿಗೆ ಹಣ ನೀಡುವುದು ಬಾಕಿ ಇತ್ತು. ಕಳೆದ 11 ತಿಂಗಳಲ್ಲಿ 700ಕ್ಕೂ ಹೆಚ್ಚು ಬೆಳೆಗಾರರಿಗೆ ಹಣ ನೀಡಲಾಗಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಬೆಳೆಗಾರರಿಗೆ ಹಣ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
A non-bailable warrant has been issued in a cheque bounce case against the directors of the Cafe Coffee Day company. One of the directors is former Chief Minister SM Krishna's daughter Malavika Hegde.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm