ಬ್ರೇಕಿಂಗ್ ನ್ಯೂಸ್
05-11-20 06:08 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 05: ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕ ಸಿದ್ಧಾರ್ಥ್ ಸೇರಿ ಕಾಫಿ ಡೇ ಕಂಪನಿಯ ಸೇರಿ 8 ಜನರಿಗೆ ಮೂಡಿಗೆರೆ ಜೆಎಂಎಫ್ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ 300ಕ್ಕೂ ಹೆಚ್ಚು ಬೆಳೆಗಾರರಿಗೆ 100 ಕೋಟಿಗೂ ಅಧಿಕ ಹಣವನ್ನು ಎಬಿಸಿ ಕಂಪೆನಿ ಬಾಕಿ ಉಳಿಸಿಕೊಂಡಿದ್ದು ಇದರ ವಿರುದ್ಧ ಕಾಫಿ ಬೆಳೆಗಾರ ನಂದೀಶ್ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್, ಪ್ರತಿ ವರ್ಷ ಕಾಫಿಯನ್ನು ಎಬಿಸಿ ಕಂಪೆನಿಗೆ ನೀಡುತ್ತಿದ್ದರು. ಆದರೆ, ಸಿದ್ಧಾರ್ಥ್ ನಿಧನರಾದ ಬಳಿಕ ಬೆಳೆಗಾರರಿಗೆ ಕಂಪೆನಿಯಿಂದ ಬರುತ್ತಿದ್ದ ಹಣ ನಿಂತು ಹೋಗಿದೆ. ನಂದೀಶ್ ಪೋಸ್ಟ್ ಡೇಟೆಡ್ ಚೆಕ್ ಪಡೆದು ಹಣ ನಗದು ಮಾಡಿಕೊಳ್ಳುತ್ತಿದ್ದರು. ಅದರಂತೆ, ನಂದೀಶ್ ಹತ್ತು ಚೆಕ್ ಪಡೆದಿದ್ದು ಅದನ್ನು ಬ್ಯಾಂಕಿಗೆ ಹಾಕಿದಾಗ ಬೌನ್ಸ್ ಆಗಿತ್ತು.
ಚೆಕ್ ಬೌನ್ಸ್ ಹಿನ್ನೆಲೆಯಲ್ಲಿ ನಂದೀಶ್ ತನಗೆ ಬರಬೇಕಿದ್ದ 45.38 ಲಕ್ಷ ಹಣಕ್ಕಾಗಿ ಕೋರ್ಟಿಗೆ ದೂರು ಸಲ್ಲಿಸಿದ್ದರು. ಕಳೆದ ಅಕ್ಟೋಬರ್ 6ರಂದು ಎಬಿಸಿ ಕಂಪೆನಿ ಕಡೆಯಿಂದ ನಿರ್ದೇಶಕರು ಕೋರ್ಟಿಗೆ ಹಾಜರಾಗಬೇಕಿತ್ತು. ಹೀಗಾಗಿ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ನ.11ಕ್ಕೆ ಇದ್ದು ಅದಕ್ಕೆ ಮುನ್ನ ಆರೋಪಿಗಳು ಕೋರ್ಟಿಗೆ ಹಾಜರಾಗಬೇಕೆಂದು ನಂದೀಶ್ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಬಗ್ಗೆ ಕಾಫಿ ಡೇ ಕಂಪನಿಯ ಕಡೆಯಿಂದ ಸ್ಪಷ್ಟನೆ ನೀಡಲಾಗಿದ್ದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ 1020 ಬೆಳೆಗಾರರಿಗೆ ಹಣ ನೀಡುವುದು ಬಾಕಿ ಇತ್ತು. ಕಳೆದ 11 ತಿಂಗಳಲ್ಲಿ 700ಕ್ಕೂ ಹೆಚ್ಚು ಬೆಳೆಗಾರರಿಗೆ ಹಣ ನೀಡಲಾಗಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಬೆಳೆಗಾರರಿಗೆ ಹಣ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
A non-bailable warrant has been issued in a cheque bounce case against the directors of the Cafe Coffee Day company. One of the directors is former Chief Minister SM Krishna's daughter Malavika Hegde.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm