ಬ್ರೇಕಿಂಗ್ ನ್ಯೂಸ್
07-08-23 08:11 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 7: ಮಂಗಳೂರಿನಿಂದ ಮುಂಬೈ ಹೊರಟಿದ್ದ ಮಂಗಳೂರು ಮೂಲದ ಇಬ್ಬರು ಮಹಿಳೆಯರನ್ನು ರೈಲಿನಲ್ಲಿ ಸುಲಿಗೆ ಮಾಡಿರುವ ಘಟನೆ ಗೋವಾ- ರತ್ನಗಿರಿ ನಡುವೆ ನಡೆದಿದೆ. ಆಗಸ್ಟ್ 4ರಂದು ಮಂಗಳೂರು- ಗೋವಾ ಮೂಲಕ ಕೇರಳದ ಕೊಚುವೆಲಿಯಿಂದ ಋಷಿಕೇಶ ತೆರಳುತ್ತಿದ್ದ ರೈಲಿನ ಎಸಿ ಕೋಚ್ ಕಂಪಾರ್ಟ್ಮೆಂಟಿನಲ್ಲಿ ಸುಲಿಗೆ ಮಾಡಲಾಗಿದೆ.
ಮಂಗಳೂರಿನ ಶಕ್ತಿನಗರ ನಿವಾಸಿಯಾಗಿರುವ ಎಲಿಜಬೆತ್ ಮತ್ತು ಅವರ ತಂಗಿ ಆಗಸ್ಟ್ 4ರಂದು ಸಂಜೆ 5.30 ಗಂಟೆಗೆ ಮಂಗಳೂರಿನ ಕಂಕನಾಡಿ ಜಂಕ್ಷನ್ ರೈಲು ನಿಲ್ದಾಣದಿಂದ ರೈಲು ಹತ್ತಿದ್ದರು. ಎಸಿ ಕೋಚ್ ನಲ್ಲಿದ್ದ ಮಹಿಳೆಯರು ಅಕ್ಕ- ಪಕ್ಕದ ಸೀಟಿನಲ್ಲಿ ರಾತ್ರಿ ಹತ್ತು ಗಂಟೆ ವೇಳೆಗೆ ಮಲಗಿದ್ದರು. ಮಹಿಳೆಯರು ಥಾಣೆ ಬಳಿಯ ವಸಾಯಿ ರೈಲು ನಿಲ್ದಾಣದಲ್ಲಿ ಇಳಿಯಬೇಕಿತ್ತು. ಬೆಳಗ್ಗೆ 6 ಗಂಟೆ ವೇಳೆಗೆ ರೈಲು ರತ್ನಗಿರಿ ತಲುಪಿದ್ದಾಗ ಎಚ್ಚರಗೊಂಡಿದ್ದು ಟಾಯ್ಲೆಟ್ ಹೋಗಬೇಕು ಅನ್ನುವಷ್ಟರಲ್ಲಿ ಬ್ಯಾಗ್ ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ, ಖಾಲಿ ಬ್ಯಾಗ್ ಹೊರಭಾಗದಲ್ಲಿ ಟಾಯ್ಲೆಟ್ ಹತ್ತಿರ ಬಿದ್ದಿರುವುದು ಕಂಡುಬಂದಿತ್ತು.
ಬ್ಯಾಗಿನಲ್ಲಿದ್ದ 15 ಸಾವಿರದಷ್ಟಿದ್ದ ಹಣ, ಎಟಿಎಂ ಕಾರ್ಡ್, ಆಧಾರ್, ಪಾನ್ ಕಾರ್ಡ್ ಹೀಗೆ ಎಲ್ಲ ದಾಖಲೆ ಪತ್ರಗಳನ್ನೂ ಯಾರೋ ಸುಲಿಗೆ ಮಾಡಿದ್ದರು. ಹುಡುಕಾಟ ನಡೆಸುತ್ತಿದ್ದಾಗ ಅಲ್ಲಿಗೆ ಬಂದಿದ್ದ ರೈಲಿನ ಟಿಟಿಇ, ಕಳವು ಕೃತ್ಯದ ಬಗ್ಗೆ ಮಾಹಿತಿ ಪಡೆದು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳಗ್ಗೆ ಎದ್ದಾಗ ವೀಕ್ ನೆಸ್ ಥರಾ ಇತ್ತು. ಕಣ್ಣು ಮಂಜಾಗಿತ್ತು. ಹೀಗಾಗಿ ನಡುರಾತ್ರಿಯಲ್ಲಿ ಕಳ್ಳರು ಒಳಹೊಕ್ಕು ಮುಖಕ್ಕೆ ಸ್ಪ್ರೇ ಮಾಡಿ ನಮಗೆ ಗಾಢ ನಿದ್ದೆ ಬರುವಂತೆ ಮಾಡಿರಬೇಕು ಎಂದು ಎಲಿಜಬೆತ್ ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.
ಅಲ್ಲದೆ, ರೈಲಿನಲ್ಲಿ ಏಸಿ ಕಂಪಾರ್ಟ್ಮೆಂಟ್ ಅದರ ಬಾಗಿಲು ತೆರೆದುಕೊಂಡಿತ್ತು. ಅದರಿಂದಲೇ ಕಳ್ಳರು ನುಗ್ಗಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸಾಮಾನ್ಯವಾಗಿ ಎಸಿ ಬೋಗಿಯಲ್ಲಿ ಫುಲ್ ಆಗಿದ್ದರೆ, ಹೊರಗಿನಿಂದ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಎಲಿಜಬೆತ್ ಮುಂಬೈ ನಿವಾಸಿಗಳಾಗಿದ್ದು, ಮೂರು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನೆಲೆಸಿದ್ದರು. ಇವರ ಮಗ ಮುಂಬೈನಲ್ಲಿದ್ದು, ತಂಗಿಯ ಜೊತೆಗೆ ಅಲ್ಲಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
Robbery in Mangalore Mumbai AC train coach train, women loses cash, atm cards and documents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm