ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm