ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm