ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm