ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm