ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm