ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm