ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm