ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm