ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm