ಬ್ರೇಕಿಂಗ್ ನ್ಯೂಸ್
18-08-23 04:23 pm HK News Desk ಕ್ರೈಂ
ಇಂಪಾಲ, ಆಗಸ್ಟ್ 18: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕುಕಿ ಸಮುದಾಯದ ಮೂವರನ್ನು ಶುಕ್ರವಾರ ಹತ್ಯೆ ಮಾಡಿದ್ದಾರೆ.
ಪೊಲೀಸರ ಪ್ರಕಾರ, ನಾಗಾ ಬುಡಕಟ್ಟು ಜನಾಂಗದ ತಂಗ್ಖುಲ್ಗಳ ಪ್ರಾಬಲ್ಯವಿರುವ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕುಕಿ ಬುಡಕಟ್ಟು ಜನಾಂಗದವರು ವಾಸಿಸುವ ತೌವೈ ಕುಕಿ ಎಂಬ ಗ್ರಾಮದಲ್ಲಿ ಈ ಘಟನೆಯು ಮುಂಜಾನೆ 4:30 ರ ಸುಮಾರಿಗೆ ನಡೆದಿದೆ. ಜಿಲ್ಲೆಯ ಉಖ್ರುಲ್ ಪಟ್ಟಣದಿಂದ ಸುಮಾರು 47 ಕಿಮೀ ದೂರದಲ್ಲಿ ಈ ಗ್ರಾಮವಿದೆ.
'ನಮ್ಮ ಮಾಹಿತಿಯ ಪ್ರಕಾರ, ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪು ಗ್ರಾಮದ ಪೂರ್ವಕ್ಕೆ ಇರುವ ಬೆಟ್ಟಗಳಿಂದ ಗ್ರಾಮವನ್ನು ಸಮೀಪಿಸಿತು. ಗ್ರಾಮದ ಗಾರ್ಡ್ಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿತು. ಘಟನೆಯಲ್ಲಿ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಯಾವುದೇ ಗಾಯಗಳ ವರದಿಯಾಗಿಲ್ಲ' ಎಂದು ಉಖ್ರುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಎನ್ ವಶುಮ್ ಹೇಳಿದ್ದಾರೆ.

ಘಟನೆಯ ನಂತರ, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಹಿಡಿಯಲು ರಾಜ್ಯ ಪೊಲೀಸರು ಮತ್ತು ಭಾರತೀಯ ಸೇನೆಯು ಜಂಟಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಈ ಘಟನೆಯು ಮೈತೇಯಿ ಮತ್ತು ಕುಕಿಗಳ ನಡುವೆ ನಡೆಯುತ್ತಿರುವ ಘರ್ಷಣೆಗೆ ಸಂಬಂಧಿಸಿದೆ ಎಂದು ಎಸ್ಪಿ ಹೇಳಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದರೂ ದುಷ್ಕರ್ಮಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಆದರೆ ದಾಳಿಕೋರರ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 5 ರಂದು, ಬಿಷ್ಣುಪುರ್ ಮತ್ತು ಚುರಾಚಂದ್ಪುರ ಜಿಲ್ಲೆಗಳಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿ ನಡೆದಿತ್ತು. ಈ ಪ್ರತ್ಯೇಕ ಘಟನೆಗಳಲ್ಲಿ ಐವರು ಸಾವನ್ನಪ್ಪಿದ್ದರು. ಅದರಲ್ಲಿ ಮೂವರು ಮೈತೇಯಿ ಮತ್ತು ಇಬ್ಬರು ಕುಕಿಗಳು ಸಾವನ್ನಪ್ಪಿದ್ದರು.

ಮಣಿಪುರದಲ್ಲಿ ಮೊದಲ ಬಾರಿಗೆ ಮೇ 3 ರಂದು ಚುರಾಚಂದ್ಪುರ ಪಟ್ಟಣದಲ್ಲಿ ಘರ್ಷಣೆಗಳು ಪ್ರಾರಂಭವಾದವು. ಮೈತೀಸ್ಗೆ ಘೋಷಿಸಿದ ಮೀಸಲಾತಿಯನ್ನು ವಿರೋಧಿಸಿ ಕುಕಿ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ಇದು ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಯಿತು.
ಈ ವರೆಗೂ ನಡೆದ ಘರ್ಷಣೆಗಳು 160 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 50,000 ಜನರನ್ನು ಸ್ಥಳಾಂತರಿಸಲಾಗಿದೆ. ರಾಜ್ಯದ ಜನಸಂಖ್ಯೆಯ ಸುಮಾರು ಶೇ 53 ರಷ್ಟು ಮೈತೇಯಿ ಜನರಿದ್ದರೆ, ಕುಕಿಗಳು ಸುಮಾರು ಶೇ 16 ರಷ್ಟಿದ್ದಾರೆ.
Ukhrul SP said that the security measures have been beefed up and joint operations by state police and the Indian Army are underway to nab those involved.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm