ಬ್ರೇಕಿಂಗ್ ನ್ಯೂಸ್
19-08-23 09:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 19: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಜೆಸಿಬಿ ಸೇರಿದಂತೆ ಹತ್ತು ಟಿಪ್ಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಸಂಜೆ 7.30ರ ಸುಮಾರಿಗೆ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ನದಿಯಿಂದಲೇ ನೇರವಾಗಿ ಮರಳನ್ನು ಎತ್ತಿ ಜೆಸಿಬಿ ಮತ್ತು ಡೋಜರ್ ಮೂಲಕ ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ. ಒಂದು ಜೆಸಿಬಿ, ಒಂದು ಡೋಜರ್, ಮರಳು ತುಂಬಿದ್ದ ಎರಡು ಟಿಪ್ಪರ್, ಎಂಟು ಖಾಲಿ ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಟಿಪ್ಪರ್, ಜೆಸಿಬಿ ಯಾರಿಗೆ ಸೇರಿದ್ದು, ಯಾರ ಒಡೆತನದಲ್ಲಿ ಮರಳುಗಾರಿಕೆ ನಡೆಸುತ್ತಿದ್ದರು ಎನ್ನುವ ಬಗ್ಗೆ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ 1.25 ಕೋಟಿ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮರಳು ಮತ್ತು ವಾಹನಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಅಲ್ಲದೆ, ಇಲ್ಲಿ ಯಾರು ಮರಳುಗಾರಿಕೆ ನಡೆಸುತ್ತಿದ್ದರು, ವಾಹನಗಳು ಯಾರಿಗೆ ಸೇರಿದ್ದು ಅನ್ನುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೇರವಾಗಿ ಮಾಹಿತಿ ನೀಡುವಂತೆ ಕೇಳಿಕೊಂಡಿದ್ದಾರೆ. ಉಳಾಯಿಬೆಟ್ಟು ಪರಿಸರದಲ್ಲಿ ಹಿಂದಿನಿಂದಲೂ ಮರಳುಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಇದ್ದರೂ ಪೊಲೀಸರು ದಾಳಿ ನಡೆಸಿದ್ದಿಲ್ಲ.
Ulaibettu police raid on illegal mining, JCB trucks and machines seized in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm