ಬ್ರೇಕಿಂಗ್ ನ್ಯೂಸ್
22-08-23 01:19 pm HK News Desk ಕ್ರೈಂ
ಮಡಿಕೇರಿ, ಆಗಸ್ಟ್ 22: ಇಲ್ಲಿನ ಮೆಡಿಕಲ್ ಕಾಲೇಜು ಆವರಣದಲ್ಲಿಪುಂಡಾಟದ ವರ್ತನೆ ತೋರಿದ್ದಲ್ಲದೆ, ಅಶ್ಲೀಲ ಪ್ರದರ್ಶನ ಮಾಡಿದ್ದ ಆರೋಪಿಗಳಲ್ಲಿ ಒಬ್ಬನನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಮಧ್ಯರಾತ್ರಿಯ ಹೊತ್ತು ಇಲ್ಲಿನ ಲೇಡಿಸ್ ಹಾಸ್ಟೆಲ್ ಆವರಣಕ್ಕೆಕೆಲವು ಪುಂಡ ಯುವಕರು ಆಗಮಿಸಿ ಪುಂಡಾಟಿಕೆ ನಡೆಸುವುದಲ್ಲದೆ, ಅಲ್ಲೇ ಮುಕ್ತವಾಗಿ ಹಸ್ತಮೈಥುನ ನಡೆಸುತ್ತಿರುವ ಬಗ್ಗೆ ಈಗಾಗಲೇ ಹಲವು ಬಾರಿ ದೂರು ನೀಡಲಾಗಿತ್ತು. ಆದರೆ, ಯಾರೂ ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇದ್ದಾಗ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ದುಷ್ಟ ಕೂಟದ ಅಸಭ್ಯ ವರ್ತನೆಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದರೂ ಕ್ರಮ ಕೈಗೊಳ್ಳದ ವಿರುದ್ಧ ಸಿಟ್ಟಿಗೆದ್ದಿದ್ದರು. ಇದರ ಬೆನ್ನಿಗೇ ಒಬ್ಬ ಆರೋಪಿಯ ಅರೆಸ್ಟ್ ಆಗಿದೆ.
ಸೋಮವಾರ ನಡೆದ ಪ್ರತಿಭಟನೆ ವೇಳೆ ಮಡಿಕೇರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಆಡಳಿತ ಮಂಡಳಿ, ವಿದ್ಯಾರ್ಥಿನಿಯರಿಗೆ ಎದುರಾಗಿರುವ ಅಸುರಕ್ಷಿತ ಭಾವವನ್ನು ದೂರ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ತಕ್ಷಣದಿಂದಲೇ ಕಾರ್ಯಪ್ರವೃತ್ತರಾದ ಮಡಿಕೇರಿ ಪೊಲೀಸರು ಕತ್ತಲೆಕಾಡು ನಿವಾಸಿ ಸಿಜಿಲ್(22) ಎಂಬಾತನನ್ನು ಬಂಧಿಸಿದ್ದಾರೆ.

ಕಾಲೇಜು ಮತ್ತು ಹಾಸ್ಟೆಲ್ ಆವರಣದ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಪುಂಡರ ವರ್ತನೆಯ ದೃಶ್ಯಾವಳಿಗಳು ಸೆರೆಯಾಗಿರುವುದನ್ನು ವಿದ್ಯಾರ್ಥಿಗಳು ಉಲ್ಲೇಖಿಸಿದ್ದರು. ಪೊಲೀಸರು ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಿಜಿಲ್ ಬೈಕ್ನಲ್ಲಿ ಬಂದು ಹುಡುಗಿಯರಿಗೆ ತೊಂದರೆ ಮಾಡುತ್ತಿದ್ದುದಲ್ಲದೆ, ಮಧ್ಯರಾತ್ರಿಯ ಹೊತ್ತು ಹಾಸ್ಟೆಲ್ ಎದುರು ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಪ್ರಸಕ್ತ ಸಿಜಿಲ್ನನ್ನು ಬಂಧಿಸಲಾಗಿದೆ. ಆದರೆ, ಈ ದುಷ್ಕೃತ್ಯದಲ್ಲಿ ಇನ್ನೂ ಹಲವು ಯುವಕರು ಭಾಗಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Kodagu Institute of Medical Science students stage protest over indecent behaviour by boys of Masturbation. One arrested by Police after protest. The students said that miscreants have been behaving indecently in front of them. The act has been recorded on CCTV. Fear has gripped the students, they alleged.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm