ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm