ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm