ಬ್ರೇಕಿಂಗ್ ನ್ಯೂಸ್
25-08-23 06:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 25: ಲೋನ್ ಆ್ಯಪ್ ಮೂಲಕ ಸಾಲ ಪಡೆದ ಮಹಿಳೆಗೆ ಸಾಲ ಮರುಪಾವತಿಸಿದ ಬಳಿಕವೂ ಹೆಚ್ಚಿನ ಹಣಕ್ಕೆ ಒತ್ತಾಯಿಸಿ ನಗ್ನ ಪೊಟೋ ಹರಿಬಿಡುವ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನೊಂದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಏಪ್ರಿಲ್ 15ರಂದು ಮಹಿಳೆ ಗೂಗಲ್ ಪ್ಲೇ ಸ್ಟೋರ್ನಿಂದ ಲೋನ್ ಆ್ಯಪ್ವೊಂದನ್ನು ಡೌನ್ಲೋಡ್ ಮಾಡಿ, ಅದರಲ್ಲಿ 10,000 ರೂಪಾಯಿ ಲೋನ್ಗೆ ಅಪ್ಲೈ ಮಾಡಿದ್ದರು. ಕೂಡಲೇ ಅವರ ಖಾತೆಗೆ 7,500 ರೂ. ಕ್ರೆಡಿಟ್ ಆಗಿತ್ತು. ಸ್ವಲ್ಪ ದಿನಗಳ ನಂತರ 10000 ರೂ.ಗಳನ್ನು ಮರು ಪಾವತಿ ಮಾಡಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾಲ ತೀರಿಸಿದ ನಂತರದ ದಿನಗಳಲ್ಲಿಯೂ ವಿವಿಧ ವಾಟ್ಸ್ಆ್ಯಪ್ ನಂಬರ್ಗಳ ಮೂಲಕ ಮಹಿಳೆಗೆ ಪುನಃ ಕಡ್ಡಾಯವಾಗಿ ಮತ್ತೆ ಲೋನ್ ಪಡೆಯಬೇಕು ಎಂದು ಒತ್ತಾಯಿಸಿ ಅವರ ಖಾತೆಗೆ 14,000 ರೂ. ಕ್ರೆಡಿಟ್ ಮಾಡಿದ್ದಾರೆ. ಈ ಹಣವನ್ನು ಮಹಿಳೆ ಮರುಪಾವತಿ ಮಾಡಿದ್ದರು. ಆದರೆ, ಪಡೆದ ಹಣವನ್ನೆಲ್ಲ ಪಾವತಿಸಿದ ಬಳಿಕವೂ ಆ್ಯಪ್ನವರ ಕಿರುಕುಳ ಮುಂದುವರೆದಿದ್ದು, ವಿವಿಧ ಮೊಬೈಲ್ ನಂಬರ್ಗಳಿಂದ ಕರೆ ಮಾಡಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗೆ ಹಂತ ಹಂತವಾಗಿ ತನ್ನ ಕಡೆಯಿಂದ ಒಟ್ಟೂ 51,000 ರೂ.ಗಳನ್ನು ಆ್ಯಪ್ನವರು ಹಾಕಿಸಿಕೊಂಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ.
ನಂತರವೂ ಕೂಡ ಮಹಿಳೆಗೆ ವಿವಿಧ ನಂಬರ್ಗಳಿಂದ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ್ದು, ಮಹಿಳೆಯ ಫೋಟೋವನ್ನು ಓರ್ವ ಹುಡುಗನೊಂದಿಗೆ ನಗ್ನವಾಗಿ ಇರುವ ರೀತಿಯಲ್ಲಿ ಎಡಿಟ್ ಮಾಡಿ ಕಳುಹಿಸಿದ್ದಾರೆ. ಹಣ ಕಳಿಸದಿದ್ದರೆ ಫೋಟೋವನ್ನು ಸಂಬಂಧಿಕರು ಹಾಗೂ ಇತರರಿಗೆ ಕಳುಹಿಸಲಾಗುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ನೊಂದ ಮಹಿಳೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Loan from mobile app, women black mailed of making nude photo viral in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm