ಬ್ರೇಕಿಂಗ್ ನ್ಯೂಸ್
25-08-23 06:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 25: ಲೋನ್ ಆ್ಯಪ್ ಮೂಲಕ ಸಾಲ ಪಡೆದ ಮಹಿಳೆಗೆ ಸಾಲ ಮರುಪಾವತಿಸಿದ ಬಳಿಕವೂ ಹೆಚ್ಚಿನ ಹಣಕ್ಕೆ ಒತ್ತಾಯಿಸಿ ನಗ್ನ ಪೊಟೋ ಹರಿಬಿಡುವ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನೊಂದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಏಪ್ರಿಲ್ 15ರಂದು ಮಹಿಳೆ ಗೂಗಲ್ ಪ್ಲೇ ಸ್ಟೋರ್ನಿಂದ ಲೋನ್ ಆ್ಯಪ್ವೊಂದನ್ನು ಡೌನ್ಲೋಡ್ ಮಾಡಿ, ಅದರಲ್ಲಿ 10,000 ರೂಪಾಯಿ ಲೋನ್ಗೆ ಅಪ್ಲೈ ಮಾಡಿದ್ದರು. ಕೂಡಲೇ ಅವರ ಖಾತೆಗೆ 7,500 ರೂ. ಕ್ರೆಡಿಟ್ ಆಗಿತ್ತು. ಸ್ವಲ್ಪ ದಿನಗಳ ನಂತರ 10000 ರೂ.ಗಳನ್ನು ಮರು ಪಾವತಿ ಮಾಡಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾಲ ತೀರಿಸಿದ ನಂತರದ ದಿನಗಳಲ್ಲಿಯೂ ವಿವಿಧ ವಾಟ್ಸ್ಆ್ಯಪ್ ನಂಬರ್ಗಳ ಮೂಲಕ ಮಹಿಳೆಗೆ ಪುನಃ ಕಡ್ಡಾಯವಾಗಿ ಮತ್ತೆ ಲೋನ್ ಪಡೆಯಬೇಕು ಎಂದು ಒತ್ತಾಯಿಸಿ ಅವರ ಖಾತೆಗೆ 14,000 ರೂ. ಕ್ರೆಡಿಟ್ ಮಾಡಿದ್ದಾರೆ. ಈ ಹಣವನ್ನು ಮಹಿಳೆ ಮರುಪಾವತಿ ಮಾಡಿದ್ದರು. ಆದರೆ, ಪಡೆದ ಹಣವನ್ನೆಲ್ಲ ಪಾವತಿಸಿದ ಬಳಿಕವೂ ಆ್ಯಪ್ನವರ ಕಿರುಕುಳ ಮುಂದುವರೆದಿದ್ದು, ವಿವಿಧ ಮೊಬೈಲ್ ನಂಬರ್ಗಳಿಂದ ಕರೆ ಮಾಡಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗೆ ಹಂತ ಹಂತವಾಗಿ ತನ್ನ ಕಡೆಯಿಂದ ಒಟ್ಟೂ 51,000 ರೂ.ಗಳನ್ನು ಆ್ಯಪ್ನವರು ಹಾಕಿಸಿಕೊಂಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ.
ನಂತರವೂ ಕೂಡ ಮಹಿಳೆಗೆ ವಿವಿಧ ನಂಬರ್ಗಳಿಂದ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ್ದು, ಮಹಿಳೆಯ ಫೋಟೋವನ್ನು ಓರ್ವ ಹುಡುಗನೊಂದಿಗೆ ನಗ್ನವಾಗಿ ಇರುವ ರೀತಿಯಲ್ಲಿ ಎಡಿಟ್ ಮಾಡಿ ಕಳುಹಿಸಿದ್ದಾರೆ. ಹಣ ಕಳಿಸದಿದ್ದರೆ ಫೋಟೋವನ್ನು ಸಂಬಂಧಿಕರು ಹಾಗೂ ಇತರರಿಗೆ ಕಳುಹಿಸಲಾಗುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ನೊಂದ ಮಹಿಳೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Loan from mobile app, women black mailed of making nude photo viral in Mangalore.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm