ಬ್ರೇಕಿಂಗ್ ನ್ಯೂಸ್
25-08-23 07:01 pm HK News Desk ಕ್ರೈಂ
ಚೆನ್ನೈ, ಆಗಸ್ಟ್ 25: ಇಂದು ಅಂಗೈ ಅಗಲದ ಮೊಬೈಲ್ ಇದ್ದರೆ ಸಾಕು, ಕುಳಿತಲ್ಲಿಂದಲೇ ಎಲ್ಲಾ ವಿದ್ಯೆಗಳನ್ನೂ ಕಲಿಯಬಹುದು. ಆದರೆ ಈ ಕಲಿಕೆಯನ್ನು ಪ್ರಯೋಗಿಸಲು ಹೊರಟಾಗಲೇ ತಾವು ಕಲಿತ ವಿದ್ಯೆ ಅಪೂರ್ಣ ಎನ್ನುವುದು ಅರಿವಾಗುವುದು. ಇಂತಹ ಪ್ರಯೋಗ, ಸಾಮಾನ್ಯ ವಿಷಯಗಳ ಮೇಲೆ ನಡೆದರೆ ದೊಡ್ಡ ಸಮಸ್ಯೆಯಾಗಲಾರದು. ಆದರೆ ಜೀವದ ಮೇಲೆ ನಡೆದರೆ? ತಮಿಳುನಾಡಿನಲ್ಲಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಪತ್ನಿಗೆ ಸ್ವತಃ ತಾನೇ ಹೆರಿಗೆ ಮಾಡಿಸಲು ಹೋಗಿ ಆಕೆಯ ಜೀವ ತೆಗೆದ ದಾರುಣ ಘಟನೆ ವರದಿಯಾಗಿದೆ.
ಯೂಟ್ಯೂಬ್ನಲ್ಲಿ ನೋಡಿ ಕಲಿತ ತಂತ್ರವನ್ನು ಬಳಸಿಕೊಂಡು, ಮನೆಯಲ್ಲಿಯೇ ಸಹಜ ಹೆರಿಗೆ ಮಾಡಿಸಲು ಗಂಡ ಮುಂದಾಗಿದ್ದಾನೆ. ಇದರ ಪರಿಣಾಮ ಪ್ರಸವದ ವೇಳೆ ವಿಪರೀತ ರಕ್ತಸ್ರಾವ ಉಂಟಾಗಿ 27 ವರ್ಷದ ಮಹಿಳೆ ಮೃತಪಟ್ಟಿದ್ದಾಳೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಹೊಕ್ಕಳು ಬಳ್ಳಿಯನ್ನು ಸರಿಯಾಗಿ ಕತ್ತರಿಸಲು ಆತನಿಗೆ ಸಾಧ್ಯವಾಗದೆ ಇದ್ದಿದ್ದರಿಂದ ಮಹಿಳೆಯಲ್ಲಿ ಭಾರಿ ಪ್ರಮಾಣದಲ್ಲಿ ರಕ್ತ ಸೋರಿಕೆಯಾಗಿದೆ.
ಪೊಚಂಪಳ್ಳಿ ಸಮೀಪದ ಪುಲಿಯಾಂಪಟ್ಟಿ ನಿವಾಸಿಯಾಗಿದ್ದ ಲೋಕನಾಯಕಿಯ ಸಾವಿನ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್ಸಿ) ವೈದ್ಯಕೀಯ ಅಧಿಕಾರಿ ರಾಧಿಕಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಮಂಗಳವಾರ ಮುಂಜಾನೆ ಲೋಕನಾಯಕಿಯಲ್ಲಿ ಪ್ರಸವ ವೇದನೆ ಕಾಣಿಸಿಕೊಂಡಿತ್ತು. ಆಕೆಯ ಗಂಡ ಮಾದೇಶ್, ತಾನು ಯೂಟ್ಯೂಬ್ ನೋಡಿ ಕಲಿತಿದ್ದ ಹೆರಿಗೆ ವಿಧಾನವನ್ನು ಆಕೆಯ ಮೇಲೆ ಪ್ರಯೋಗಿಸಿದ್ದಾನೆ. ಹೆರಿಗೆ ವೇಳೆ ಹೊಕ್ಕಳು ಬಳ್ಳಿಯನ್ನು ಸಮರ್ಪಕವಾಗಿ ಕತ್ತರಿಸಿರಲಿಲ್ಲ. ಇದರಿಂದ ವಿಪರೀತ ರಕ್ತಸ್ರಾವವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು, ನವಜಾತ ಗಂಡು ಶಿಶುವಿನ ಜತೆ ಪಿಎಚ್ಸಿಗೆ ಕರೆತರಲಾಗಿತ್ತು. ಆದರೆ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು.
ಪಿಎಚ್ಸಿ ಅಧಿಕಾರಿ ನೀಡಿದ ದೂರಿನ ಅನ್ವಯ ಸಿಆರ್ಪಿಸಿ 174 ಸೆಕ್ಷನ್ ಅಡಿ ಪೊಲೀಸರು, ಮಹಿಳೆಯ ಪತಿ ಮಾದೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮನೆಯಲ್ಲಿಯೇ ಗರ್ಭಿಣಿಗೆ ಹೆರಿಗೆ ಮಾಡುವುದು ಹೇಗೆ ಎಂಬ ಬಗ್ಗೆ ಯೂಟ್ಯೂಬ್ ಚಾನೆಲ್ಗಳನ್ನು ನಿರಂತರವಾಗಿ ವೀಕ್ಷಿಸುತ್ತಿದ್ದ ಎಂದು ಅಕ್ಕಪಕ್ಕದ ಮನೆಯವರು ನೀಡಿದ ಮಾಹಿತಿ ಆಧಾರದಲ್ಲಿ 30 ವರ್ಷದ ಮಾದೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ನವಜಾತ ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೊಚಂಪಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲೋಕನಾಯಕಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಆಕೆಯ ಗಂಡ ಮಾದೇಶ್, ಮನೆಯಲ್ಲಿಯೇ ಹೆರಿಗೆ ಮಾಡಿಸಲು ಪ್ರಯತ್ನಿಸಿದ್ದ. ಆಕೆಯನ್ನು ಆಸ್ಪತ್ರೆಗೆ ಕರೆತರುವಾಗ ಆಕೆ ಮೃತಪಟ್ಟಿದ್ದಳು ಎಂದು ದೂರಿನಲ್ಲಿ ರಾಧಿಕಾ ತಿಳಿಸಿದ್ದಾರೆ.
A 27-year-old woman in Tamil Nadu's Krishnagiri died during delivery due to severe blood loss while her husband attempted a natural birth at home, reportedly using a technique he learned on YouTube. The woman suffered blood loss after her husband failed to cut the umbilical cord properly.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm