ಬ್ರೇಕಿಂಗ್ ನ್ಯೂಸ್
25-08-23 07:01 pm HK News Desk ಕ್ರೈಂ
ಚೆನ್ನೈ, ಆಗಸ್ಟ್ 25: ಇಂದು ಅಂಗೈ ಅಗಲದ ಮೊಬೈಲ್ ಇದ್ದರೆ ಸಾಕು, ಕುಳಿತಲ್ಲಿಂದಲೇ ಎಲ್ಲಾ ವಿದ್ಯೆಗಳನ್ನೂ ಕಲಿಯಬಹುದು. ಆದರೆ ಈ ಕಲಿಕೆಯನ್ನು ಪ್ರಯೋಗಿಸಲು ಹೊರಟಾಗಲೇ ತಾವು ಕಲಿತ ವಿದ್ಯೆ ಅಪೂರ್ಣ ಎನ್ನುವುದು ಅರಿವಾಗುವುದು. ಇಂತಹ ಪ್ರಯೋಗ, ಸಾಮಾನ್ಯ ವಿಷಯಗಳ ಮೇಲೆ ನಡೆದರೆ ದೊಡ್ಡ ಸಮಸ್ಯೆಯಾಗಲಾರದು. ಆದರೆ ಜೀವದ ಮೇಲೆ ನಡೆದರೆ? ತಮಿಳುನಾಡಿನಲ್ಲಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಪತ್ನಿಗೆ ಸ್ವತಃ ತಾನೇ ಹೆರಿಗೆ ಮಾಡಿಸಲು ಹೋಗಿ ಆಕೆಯ ಜೀವ ತೆಗೆದ ದಾರುಣ ಘಟನೆ ವರದಿಯಾಗಿದೆ.
ಯೂಟ್ಯೂಬ್ನಲ್ಲಿ ನೋಡಿ ಕಲಿತ ತಂತ್ರವನ್ನು ಬಳಸಿಕೊಂಡು, ಮನೆಯಲ್ಲಿಯೇ ಸಹಜ ಹೆರಿಗೆ ಮಾಡಿಸಲು ಗಂಡ ಮುಂದಾಗಿದ್ದಾನೆ. ಇದರ ಪರಿಣಾಮ ಪ್ರಸವದ ವೇಳೆ ವಿಪರೀತ ರಕ್ತಸ್ರಾವ ಉಂಟಾಗಿ 27 ವರ್ಷದ ಮಹಿಳೆ ಮೃತಪಟ್ಟಿದ್ದಾಳೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಹೊಕ್ಕಳು ಬಳ್ಳಿಯನ್ನು ಸರಿಯಾಗಿ ಕತ್ತರಿಸಲು ಆತನಿಗೆ ಸಾಧ್ಯವಾಗದೆ ಇದ್ದಿದ್ದರಿಂದ ಮಹಿಳೆಯಲ್ಲಿ ಭಾರಿ ಪ್ರಮಾಣದಲ್ಲಿ ರಕ್ತ ಸೋರಿಕೆಯಾಗಿದೆ.
ಪೊಚಂಪಳ್ಳಿ ಸಮೀಪದ ಪುಲಿಯಾಂಪಟ್ಟಿ ನಿವಾಸಿಯಾಗಿದ್ದ ಲೋಕನಾಯಕಿಯ ಸಾವಿನ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್ಸಿ) ವೈದ್ಯಕೀಯ ಅಧಿಕಾರಿ ರಾಧಿಕಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಮಂಗಳವಾರ ಮುಂಜಾನೆ ಲೋಕನಾಯಕಿಯಲ್ಲಿ ಪ್ರಸವ ವೇದನೆ ಕಾಣಿಸಿಕೊಂಡಿತ್ತು. ಆಕೆಯ ಗಂಡ ಮಾದೇಶ್, ತಾನು ಯೂಟ್ಯೂಬ್ ನೋಡಿ ಕಲಿತಿದ್ದ ಹೆರಿಗೆ ವಿಧಾನವನ್ನು ಆಕೆಯ ಮೇಲೆ ಪ್ರಯೋಗಿಸಿದ್ದಾನೆ. ಹೆರಿಗೆ ವೇಳೆ ಹೊಕ್ಕಳು ಬಳ್ಳಿಯನ್ನು ಸಮರ್ಪಕವಾಗಿ ಕತ್ತರಿಸಿರಲಿಲ್ಲ. ಇದರಿಂದ ವಿಪರೀತ ರಕ್ತಸ್ರಾವವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು, ನವಜಾತ ಗಂಡು ಶಿಶುವಿನ ಜತೆ ಪಿಎಚ್ಸಿಗೆ ಕರೆತರಲಾಗಿತ್ತು. ಆದರೆ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು.
ಪಿಎಚ್ಸಿ ಅಧಿಕಾರಿ ನೀಡಿದ ದೂರಿನ ಅನ್ವಯ ಸಿಆರ್ಪಿಸಿ 174 ಸೆಕ್ಷನ್ ಅಡಿ ಪೊಲೀಸರು, ಮಹಿಳೆಯ ಪತಿ ಮಾದೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮನೆಯಲ್ಲಿಯೇ ಗರ್ಭಿಣಿಗೆ ಹೆರಿಗೆ ಮಾಡುವುದು ಹೇಗೆ ಎಂಬ ಬಗ್ಗೆ ಯೂಟ್ಯೂಬ್ ಚಾನೆಲ್ಗಳನ್ನು ನಿರಂತರವಾಗಿ ವೀಕ್ಷಿಸುತ್ತಿದ್ದ ಎಂದು ಅಕ್ಕಪಕ್ಕದ ಮನೆಯವರು ನೀಡಿದ ಮಾಹಿತಿ ಆಧಾರದಲ್ಲಿ 30 ವರ್ಷದ ಮಾದೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ನವಜಾತ ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೊಚಂಪಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲೋಕನಾಯಕಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಆಕೆಯ ಗಂಡ ಮಾದೇಶ್, ಮನೆಯಲ್ಲಿಯೇ ಹೆರಿಗೆ ಮಾಡಿಸಲು ಪ್ರಯತ್ನಿಸಿದ್ದ. ಆಕೆಯನ್ನು ಆಸ್ಪತ್ರೆಗೆ ಕರೆತರುವಾಗ ಆಕೆ ಮೃತಪಟ್ಟಿದ್ದಳು ಎಂದು ದೂರಿನಲ್ಲಿ ರಾಧಿಕಾ ತಿಳಿಸಿದ್ದಾರೆ.
A 27-year-old woman in Tamil Nadu's Krishnagiri died during delivery due to severe blood loss while her husband attempted a natural birth at home, reportedly using a technique he learned on YouTube. The woman suffered blood loss after her husband failed to cut the umbilical cord properly.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm