ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm