ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm