ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm