ಬ್ರೇಕಿಂಗ್ ನ್ಯೂಸ್
29-08-23 05:56 pm HK News Desk ಕ್ರೈಂ
ಕೇರಳ, ಆಗಸ್ಟ್ 29: ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್, ಹೆರಾಯಿನ್ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್ ಮತ್ತು 1.3 ಕೆಜಿ ಹೆರಾಯಿನ್ ಅನ್ನು ಡಿಆರ್ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ರಾಜೀವ್ ಕುಮಾರ್ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಏರ್ ಅರೇಬಿಯಾ ವಿಮಾನದಲ್ಲಿ ರಾಜೀವ್ ಕುಮಾರ್ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕರಿಗಳು ತಿಳಿಸಿದ್ದಾರೆ.
ಆರೋಪಿ ತನ್ನ ಚೆಕ್ ಇನ್ ಬ್ಯಾಗೇಜ್ನಲ್ಲಿದ್ದ ಶೂಗಳು, ಕೈ ಚೀಲಗಳು, ಪಾರ್ಸ್ಗಳು, ಚಿತ್ರಫಲಕಗಳು ಮತ್ತು ಫೈಲ್ ಫೋಲ್ಡರ್ಗಳಂತಹ ವಸ್ತುಗಳ ಒಳಗೆ ನಿಷೇಧಿತ ಡ್ರಗ್ಸ್ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
In a major drug haul, ₹ 44 crore worth narcotics, including cocaine and heroin, were seized from a passenger at the international airport in Karipur in Karala, the Directorate of Revenue Intelligence (DRI) said today.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm