ಬ್ರೇಕಿಂಗ್ ನ್ಯೂಸ್
29-08-23 05:56 pm HK News Desk ಕ್ರೈಂ
ಕೇರಳ, ಆಗಸ್ಟ್ 29: ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್, ಹೆರಾಯಿನ್ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್ ಮತ್ತು 1.3 ಕೆಜಿ ಹೆರಾಯಿನ್ ಅನ್ನು ಡಿಆರ್ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ರಾಜೀವ್ ಕುಮಾರ್ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಏರ್ ಅರೇಬಿಯಾ ವಿಮಾನದಲ್ಲಿ ರಾಜೀವ್ ಕುಮಾರ್ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕರಿಗಳು ತಿಳಿಸಿದ್ದಾರೆ.
ಆರೋಪಿ ತನ್ನ ಚೆಕ್ ಇನ್ ಬ್ಯಾಗೇಜ್ನಲ್ಲಿದ್ದ ಶೂಗಳು, ಕೈ ಚೀಲಗಳು, ಪಾರ್ಸ್ಗಳು, ಚಿತ್ರಫಲಕಗಳು ಮತ್ತು ಫೈಲ್ ಫೋಲ್ಡರ್ಗಳಂತಹ ವಸ್ತುಗಳ ಒಳಗೆ ನಿಷೇಧಿತ ಡ್ರಗ್ಸ್ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
In a major drug haul, ₹ 44 crore worth narcotics, including cocaine and heroin, were seized from a passenger at the international airport in Karipur in Karala, the Directorate of Revenue Intelligence (DRI) said today.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm