ಬ್ರೇಕಿಂಗ್ ನ್ಯೂಸ್
01-09-23 05:11 pm Mangalore Correspondent ಕ್ರೈಂ
ಉಳ್ಳಾಲ, ಸೆ.1: ನರಿಂಗಾನ ಗ್ರಾಮದ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಿಟಕಿಯ ಸಲಾಕೆ ಮತ್ತು ಬಾಗಿಲು ಮುರಿದು ಕನ್ನ ಹಾಕಿದ ಕಳ್ಳರು 15 ಸಾವಿರ ನಗದು, ಎರಡು ಲ್ಯಾಪ್ ಟಾಪ್ ಮತ್ತು ತನಿಖೆಯ ಜಾಡು ತಪ್ಪಿಸಲು ಸಿಸಿಟಿವಿಯ ಮೂರು ಡಿವಿಆರ್ ಗಳನ್ನೇ ಕದ್ದೊಯ್ದಿದ್ದಾರೆ.
ಕಾಲೇಜು ಹಾಗೂ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ಕಾಲೇಜು ಪ್ರಿನ್ಸಿಪಾಲ್, ಪ್ರೌಢಶಾಲೆ ವೈಸ್ ಪ್ರಿನ್ಸಿಪಾಲ್ ಕಚೇರಿ ಇದ್ದು ಎರಡೂ ಕೊಠಡಿಗಳಿಗೆ ಕಳ್ಳರು ನಿನ್ನೆ ರಾತ್ರಿ ಕನ್ನ ಹಾಕಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಕಚೇರಿಯ ಕಿಟಕಿಯ ಸಲಾಕೆ ಮುರಿಯಲು ಕಳ್ಳರು ವಿಫಲರಾಗಿದ್ದು ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ್ದಾರೆ. ಒಳಗಿದ್ದ ಮೂರು ಕಪಾಟನ್ನು ಮುರಿದು ದಾಖಲೆ ಪತ್ರಗಳನ್ನ ತಡಕಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 15 ಸಾವಿರ ರೂಪಾಯಿ ನಗದು ಎಗರಿಸಿದ ಚಾಣಾಕ್ಷ ಕಳ್ಳರು ಮೂರು ಸ್ಮಾರ್ಟ್ ಫೋನ್ ಗಳನ್ನ ಅಲ್ಲೇ ಬಿಟ್ಟು ಒಂದು ಡಿವಿಆರ್ ಕದ್ದೊಯ್ದಿದ್ದಾರೆ. ಕಾಲೇಜು ಸ್ಟಾಫ್ ರೂಂಗೂ ಕಳ್ಳರು ನುಗ್ಗಿದ್ದು ಅಲ್ಲಿ ಏನೂ ಸಿಕ್ಕಿಲ್ಲ.
ಹೈಸ್ಕೂಲ್ ವೈಸ್ ಪ್ರಿನ್ಸಿಪಾಲ್ ಕೊಠಡಿಯ ಕಿಟಕಿಯ ಸಲಾಕೆ ಮುರಿದು ಒಳನುಗ್ಗಿದ ಕಳ್ಳರು ಎರಡು ಲ್ಯಾಪ್ ಟ್ಯಾಪ್ ,ಚಿಲ್ಲರೆ ನಗದು ಮತ್ತು ಎರಡು ಡಿವಿಆರ್ ಗಳನ್ನ ಕದ್ದೊಯ್ದಿದ್ದಾರೆ.


ಕಬಾಟುಗಳನ್ನ ತಡಕಾಡಿ ಅಮೂಲ್ಯ ದಾಖಲೆ ಪತ್ರಗಳನ್ನೆಲ್ಲ ನೆಲಕ್ಕೆಸೆದು ಹೋಗಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು ತಕ್ಷಣವೇ ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಶ್ವಾನದಳ, ಫೋರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಚಾಲಾಕಿ ಕಳ್ಳರು ಡಿವಿಆರ್ ಹೊತ್ತೊಯ್ದಿರುವುದರಿಂದ ಸಮೀಪದ ಅಂಗಡಿಗಳಲ್ಲಿ ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದಾರೆ.
Mangalore Robbers enter Naringana karnataka public school, flee with cash and laptop.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm