ಬ್ರೇಕಿಂಗ್ ನ್ಯೂಸ್
02-09-23 11:30 am HK News Desk ಕ್ರೈಂ
ಜೈಪುರ್, ಸೆ.2: ಪತ್ನಿಗೆ ಆಕೆಯ ಪತಿ ಹಾಗೂ ಕುಟುಂಬಸ್ಥರು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯ ಪತಿ ಮಹಿಳೆಯನ್ನು ವಿವಸ್ತ್ರಗೊಳಿಸುತ್ತಿರುವುದು ಹಾಗೂ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ. ಈ ವೇಳೆ ಆಕೆ ಸಹಾಯಕ್ಕಾಗಿ ಕಿರುಚಾಡಿದ್ದಾಳೆ.
ಮಹಿಳೆ ಮನೆ ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಮಹಿಳೆಯ ಪತಿ ಆಕೆಯನ್ನು ಅಪಹರಿಸಿಕೊಂಡು ಬಂದಿದ್ದ. ಬಳಿಕ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ. ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಘಟನೆಯನ್ನು ಖಂಡಿಸಿದ್ದಾರೆ. ಅಪರಾಧ ವಿಭಾಗದ ಎಡಿಜಿ ಅವರನ್ನು ಸ್ಥಳಕ್ಕೆ ಕಳುಹಿಸಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸುಸಂಸ್ಕೃತ ಸಮಾಜದಲ್ಲಿ ಇಂತಹವರಿಗೆ ಜಾಗವಿಲ್ಲ. ಆದಷ್ಟು ಬೇಗ ಈ ಕೃತ್ಯ ಎಸಗಿದವರನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಲಾಗುವುದು. ಆದಷ್ಟು ಬೇಗ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ.
Three people were held by the police after a tribal woman was allegedly beaten and paraded naked in Rajasthan's Pratapgarh district, said the police on Saturday. District Superintendent of Police (SP) Amit Kumar confirmed the information. Along with the woman's husband, two other accused were arrested.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm