ಬ್ರೇಕಿಂಗ್ ನ್ಯೂಸ್
02-09-23 08:43 pm Mangalore Correspondent ಕ್ರೈಂ
ಮಂಗಳೂರು, ಸೆ.2: "ಡ್ರಗ್ಸ್ ಫ್ರೀ ಮಂಗಳೂರು" ಎಂಬ ಗುರಿ ಇಟ್ಟುಕೊಂಡು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಮತ್ತು ಗಾಂಜಾ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಡ್ರಗ್ಸ್ ಜಾಲದ ಪ್ರಮುಖ ಸೂತ್ರಧಾರಿ ಎನ್ನಲಾದ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ ದಂಧೆಯ ಕಿಂಗ್ ಪಿನ್ ಯಾರಿದ್ದಾರೆಂದು ಪತ್ತೆ ಮಾಡಲು ಮಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ತಿಂಗಳಿನಿಂದ ತನಿಖೆ ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬಂಧಿತರಾಗಿರುವ ಹೆಚ್ಚಿನ ಆರೋಪಿಗಳಿಗೆ ನೈಜಿರಿಯಾ ಮೂಲದವರಿಂದಲೇ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿತ್ತು. ನಿರಂತರ ಕಾರ್ಯಾಚರಣೆ ಬಳಿಕ ನೈಜೀರಿಯಾ ಮೂಲದ ಮಹಿಳೆಯೊಬ್ಬಳು ತನ್ನ ನಿಜ ವಿಚಾರ ಮುಚ್ಚಿಟ್ಟು ಬೆಂಗಳೂರಿನ ಯಲಹಂಕದಲ್ಲಿ ವಾಸ್ತವ್ಯ ಇರುವುದು ಪತ್ತೆಯಾಗಿತ್ತು.
ಪೊಲೀಸರು ಇದೀಗ ನೈಜೀರಿಯಾ ಮೂಲದ ಅಡೆವೊಲೆ ಅಡೆಟುಟು ಆನು @ ರೆಜಿನಾ ಜರಾ @ ಆಯಿಶಾ(33) ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಮೂಲತಃ ನೈಜೀರಿಯಾ ದೇಶದ ಒಂಡೋ ರಾಜ್ಯದ ಅಕುರೆ ನಗರದ ನಿವಾಸಿಯಾಗಿದ್ದು ಪ್ರಸಕ್ತ ಯಲಹಂಕ ಹೋಬಳಿಯ ಜಕ್ಕೂರಿನ ಜಿಪಿ ನಾರ್ತ್ ಅವೆನ್ಯೂ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದಳು.
ಆರೋಪಿ ವಶದಿಂದ ಒಟ್ಟು 400 ಗ್ರಾಂ ತೂಕದ ರೂ. 20 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಐಫೋನ್-1, ನಗದು ರೂ. 2910 ವಶಪಡಿಸಲಾಗಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910 ಆಗಬಹುದೆಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಣದ ಉದ್ದೇಶದಲ್ಲಿ ಭಾರತದ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದ ಈಕೆ, ಬಳಿಕ ಇಲ್ಲಿಯೇ ಉಳಿದುಕೊಂಡಿದ್ದಳು. ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಆನಂತರ ನರ್ಸಿಂಗ್ ಕೆಲಸ ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಳು. ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈಕೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತು ಖರೀದಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Nigeria women main Prime drug dealer in several drug cases arrested by Mangalore police in Bangalore. the arrest was made by Mangalore CCB police
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm