ಬ್ರೇಕಿಂಗ್ ನ್ಯೂಸ್
02-09-23 08:43 pm Mangalore Correspondent ಕ್ರೈಂ
ಮಂಗಳೂರು, ಸೆ.2: "ಡ್ರಗ್ಸ್ ಫ್ರೀ ಮಂಗಳೂರು" ಎಂಬ ಗುರಿ ಇಟ್ಟುಕೊಂಡು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಮತ್ತು ಗಾಂಜಾ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಡ್ರಗ್ಸ್ ಜಾಲದ ಪ್ರಮುಖ ಸೂತ್ರಧಾರಿ ಎನ್ನಲಾದ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ ದಂಧೆಯ ಕಿಂಗ್ ಪಿನ್ ಯಾರಿದ್ದಾರೆಂದು ಪತ್ತೆ ಮಾಡಲು ಮಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ತಿಂಗಳಿನಿಂದ ತನಿಖೆ ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬಂಧಿತರಾಗಿರುವ ಹೆಚ್ಚಿನ ಆರೋಪಿಗಳಿಗೆ ನೈಜಿರಿಯಾ ಮೂಲದವರಿಂದಲೇ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿತ್ತು. ನಿರಂತರ ಕಾರ್ಯಾಚರಣೆ ಬಳಿಕ ನೈಜೀರಿಯಾ ಮೂಲದ ಮಹಿಳೆಯೊಬ್ಬಳು ತನ್ನ ನಿಜ ವಿಚಾರ ಮುಚ್ಚಿಟ್ಟು ಬೆಂಗಳೂರಿನ ಯಲಹಂಕದಲ್ಲಿ ವಾಸ್ತವ್ಯ ಇರುವುದು ಪತ್ತೆಯಾಗಿತ್ತು.
ಪೊಲೀಸರು ಇದೀಗ ನೈಜೀರಿಯಾ ಮೂಲದ ಅಡೆವೊಲೆ ಅಡೆಟುಟು ಆನು @ ರೆಜಿನಾ ಜರಾ @ ಆಯಿಶಾ(33) ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಮೂಲತಃ ನೈಜೀರಿಯಾ ದೇಶದ ಒಂಡೋ ರಾಜ್ಯದ ಅಕುರೆ ನಗರದ ನಿವಾಸಿಯಾಗಿದ್ದು ಪ್ರಸಕ್ತ ಯಲಹಂಕ ಹೋಬಳಿಯ ಜಕ್ಕೂರಿನ ಜಿಪಿ ನಾರ್ತ್ ಅವೆನ್ಯೂ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದಳು.
ಆರೋಪಿ ವಶದಿಂದ ಒಟ್ಟು 400 ಗ್ರಾಂ ತೂಕದ ರೂ. 20 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಐಫೋನ್-1, ನಗದು ರೂ. 2910 ವಶಪಡಿಸಲಾಗಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910 ಆಗಬಹುದೆಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಣದ ಉದ್ದೇಶದಲ್ಲಿ ಭಾರತದ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದ ಈಕೆ, ಬಳಿಕ ಇಲ್ಲಿಯೇ ಉಳಿದುಕೊಂಡಿದ್ದಳು. ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಆನಂತರ ನರ್ಸಿಂಗ್ ಕೆಲಸ ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಳು. ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈಕೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತು ಖರೀದಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Nigeria women main Prime drug dealer in several drug cases arrested by Mangalore police in Bangalore. the arrest was made by Mangalore CCB police
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm