ಬ್ರೇಕಿಂಗ್ ನ್ಯೂಸ್
04-09-23 11:18 am Mangalore Correspondent ಕ್ರೈಂ
ಮಂಗಳೂರು, ಸೆ.4: ಯುವಕನಿಗೆ ಚೂರಿ ಇರಿದು ಪರಾರಿಯಾಗಿದ್ದ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು. ಪ್ರಕರಣ ಸಂಬಂಧಿಸಿ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂಬವರನ್ನು ಬಂಧಿಸಲಾಗಿದೆ.

ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪುನೀತ್, ಬಬ್ಬು ಗಣೇಶ್ ಸೇರಿದಂತೆ ಹಲವರ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ.
Surathkal stabbing case, three arrested in a quick action by Mangalore Police. The arrested are Prashanth, Dhanraj and Yajnesh. A swift action taken by Mangalore Police commissioner Kuldeep Kumar Jain.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm