ಬ್ರೇಕಿಂಗ್ ನ್ಯೂಸ್
09-11-20 10:46 am Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಯುವತಿಯನ್ನ 13 ವರ್ಷ ಪ್ರೀತಿ ನೆಪದಲ್ಲಿ ಸಂಬಂಧ ಬೆಳೆಸಿಕೊಂಡಿದ್ದ ಯುವಕನೊಬ್ಬ ಮದುವೆಯ ದಿನವೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಮಣಿಪಾಲ ಮೂಲದ ಮಮತಾ ಮತ್ತು ಪರ್ಕಳದ ಗಣೇಶ್ ಅವರ ಸುದೀರ್ಘ ಕಾಲದ ಪ್ರೇಮ ಕಥೆಯಿದು. ಹ್ಯಾಂಗ್ಯೋ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ನಡುವೆ 13 ವರ್ಷದ ಹಿಂದೆ ಪ್ರೇಮಾಂಕುರವಾಗಿತ್ತು ಈ ಅವಧಿಯಲ್ಲಿ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿದ್ದು ಮದುವೆಯಾಗುವುದಾಗಿ ನಂಬಿಸಿ ಯುವಕ 13 ವರ್ಷ ದಿನ ದೂಡಿದ್ದಾನೆ. ಈ ಮಧ್ಯೆ, ಎರಡು ಬಾರಿ ಅಬಾರ್ಷನ್ ಕೂಡ ಮಾಡಿಸಿದ್ದಾನೆ.
ಆದರೆ, ಇತ್ತೀಚೆಗೆ ಬೇರೆ ಹುಡುಗಿಯ ಜೊತೆ ಮದುವೆಯಾಗಲು ಮುಂದಾಗಿದ್ದ ಗಣೇಶ್, ನವೆಂಬರ್ ನಾಲ್ಕಕ್ಕೆ ಮದುವೆ ಮಹೂರ್ತ ಫಿಕ್ಸ್ ಮಾಡಿದ್ದಾನೆ. ಈ ವಿಚಾರ ಪ್ರೀತಿಸಿದ ಮಮತಾಳಿಗೆ ಗೊತ್ತಾಗಿ, ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಂತೆ ಗಣೇಶ್, ಪ್ಲೇಟ್ ಚೇಂಜ್ ಮಾಡಿದ್ದು ನವೆಂಬರ್ ಆರಕ್ಕೆ ಪ್ರೀತಿಸಿದ ಮಮತಾಳನ್ನೇ ಮದುವೆಯಾಗುವುದಾಗಿ ಗಣೇಶ್ ಒಪ್ಪಿಕೊಂಡಿದ್ದ.

ಹೀಗಾಗಿ, ಮದುವೆಯ ಸಂಭ್ರಮದಲ್ಲಿ ಯುವತಿ ಮಮತಾ ಕಡೆಯವರು ಎಲ್ಲ ಶಾಸ್ತ್ರಗಳನ್ನು ಮುಗಿಸಿದ್ದರು. ಯುವತಿ, ಮದರಂಗಿ ಮುಗಿಸಿಕೊಂಡು ದಿಬ್ಬಣ ಶಾಸ್ತ್ರದಲ್ಲಿ ಮದುವೆ ಮಂಟಪಕ್ಕೂ ಬಂದಿದ್ದಾಳೆ. ಆದರೆ ಯುವಕ ಗಣೇಶ್ ಆಗಲೀ, ಆತನ ಕಡೆಯವರಾಗಲೀ ಬರಲಿಲ್ಲ. ಯುವಕ ಮತ್ತೆ ಕೈಕೊಟ್ಟಿದ್ದು ಗೊತ್ತಾಗಿ ಯುವತಿಗೆ ಆಕಾಶವೇ ಕುಸಿದು ಬಿದ್ದಂತಾಗಿದೆ. ಬಳಿಕ ಯುವತಿ ಆಕ್ರೋಶಗೊಂಡು ಯುವಕನ ಮನೆ, ಸಂಬಂಧಿಕರ ಮನೆಯನ್ನೆಲ್ಲ ಜಾಲಾಡಿದ್ದಾಳೆ. ಯುವಕ ಒಂದು ದಿನ ಕಳೆದರೂ ಸಿಗದಿದ್ದಾಗ ಆತನ ಮನೆಯ ಮುಂದೆ ಪ್ರತಿಭಟನೆ ಕುಳಿತಿದ್ದಾಳೆ. ಜೀವನದ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾಳೆ. 13 ವರ್ಷದ ಪ್ರೀತಿಯ ನಾಟಕಕ್ಕೆ ತಿಲಾಂಜಲಿ ಇತ್ತ ಯುವಕ ಗಣೇಶ್ ವಿರುದ್ಧ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.
A Udupi couple were involved in a love affair for 13 years. But the groom has escaped on the day of the wedding after making the girl pregnant. Now the girl's family is searching for the missing groom.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm