ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.
ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm