ಬ್ರೇಕಿಂಗ್ ನ್ಯೂಸ್
24-09-23 10:27 pm Udupi Correspondent ಕ್ರೈಂ
ಉಡುಪಿ, ಸೆ.24: ಶಂಕರಪುರ ನಿವಾಸಿಯ ಮೊಬೈಲ್ ಗೆ ಅಪರಿಚಿತನೊಬ್ಬ ಮೆಸೇಜ್ ಮಾಡಿ, ತಾನು ಬ್ಯಾಂಕ್ ಅಧಿಕಾರಿಯೆಂದು ನಂಬಿಸಿ, ಕೆವೈಸಿ ಪಡೆದು ಬ್ಯಾಂಕ್ ಖಾತೆಯಿಂದ 3,38,199 ರೂಪಾಯಿ ಎಗರಿಸಿದ ಘಟನೆ ರವಿವಾರ ಬೆಳಕಿಗೆ ಬಂದಿದೆ.
ಶಂಕರಪುರ ಕೆನರಾ ಬ್ಯಾಂಕ್ನಲ್ಲಿ ಅಕೌಂಟ್ ಹೊಂದಿರುವ ಶಂಕರಪುರ ನಿವಾಸಿ ವಲೇರಿಯನ್ ಅವರ ಪತ್ನಿಯ ಮೊಬೆ„ಲ್ ನಂಬರ್ಗೆ ಸೆ. 23ರಂದು ಅಪರಿಚಿತನೋರ್ವ 9387666481 ಸಂಖ್ಯೆಯಿಂದ ಮೆಸೇಜ್ ಮಾಡಿ ತಾನು ಬ್ಯಾಂಕ್ ಉದ್ಯೋಗಿಯಾಗಿದ್ದು ನಿಮ್ಮ ಖಾತೆಯ ಕೆವೈಸಿ ಅಪ್ಡೇಟ್ ಮಾಡಿಕೊಳ್ಳುವಂತೆ ಸೂಚಿಸಿದ್ದನು. ಅದನ್ನು ನಂಬಿದ ಅವರು ಬ್ಯಾಂಕ್ ಖಾತೆ ಸಹಿತ ಪಾಸ್ ಬುಕ್ ವಿವರವನ್ನು ನೀಡಿದ್ದರು, ಬಳಿಕ ಆತ ಖಾತೆಯ ನಾಮಿನಿಯಾಗಿರುವ ಗಂಡನ ವಿವರವನ್ನು ಕೂಡಾ ಅಪ್ಡೇಟ್ ಮಾಡುವಂತೆ ಸೂಚಿಸಿದ್ದನು.
ಇದಾದ ಬಳಿಕ ಎಟಿಎಂ ಕಾರ್ಡ್ ವಿವರವನ್ನು ಪಡೆದುಕೊಂಡ ಅಪರಿಚಿತ ತತ್ಕ್ಷಣ ಖಾತೆದಾರರ ಮೊಬೆ„ಲ್ಗೆ ಒಟಿಪಿ ಕಳುಹಿಸಿದ್ದು, ಒಟಿಪಿ ವಿವರಗಳನ್ನು ಕೇಳಿ ಪಡೆದುಕೊಂಡು ಅವರ ಖಾತೆಯಿಂದ ಕ್ರಮವಾಗಿ 1,99,999/- , 50,000/- , 80,000/- ಮತ್ತು 8200/- ಹೀಗೆ ಒಟ್ಟು 3,38,199/- ರೂಪಾಯಿ ಹಣವನ್ನು ಡ್ರಾ ಮಾಡಿ ವಂಚಿಸಿರುವುದಾಗಿ ತಿಳಿದು ಬಂದಿದೆ.
ವಂಚನೆಗೊಳಗಾಗಿರುವ ವಲೇರಿಯನ್ ಅವರು ಈ ಬಗ್ಗೆ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಆನ್ಲೈನ್ ಮೋಸ ಜಾಲಕ್ಕೆ ಸಿಲುಕಿ ಜನರು ನಿರಂತರವಾಗಿ ವಂಚನೆಗೊಳಗಾಗುತ್ತಿದ್ದು ಇಂತಹ ಘಟನೆಗಳು ಗ್ರಾಮೀಣ ಭಾಗಕ್ಕೂ ಕಾಲಿರಿಸಿರುವುದು ಆಘಾತಕಾರಿ ವಿಚಾರವಾಗಿದೆ. ಇಂತಹ ಜಾಲಗಳು ಮೊಬೈಲ್, ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕವಾಗಿ ನಿರಂತರವಾಗಿ ಜನರನ್ನು ವಂಚಿಸುತ್ತಿದ್ದು ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಿದೆ. ಎಲ್ಲ ಊರುಗಳಲ್ಲೂ ಬ್ಯಾಂಕ್ಗಳು ಹತ್ತಿರದಲ್ಲೇ ಇದ್ದು ಯಾವುದೇ ಅಪರಿಚಿತರು ಮಾಹಿತಿ ಕೇಳಿದಾಗ ಮಾಹಿತಿಯನ್ನು ರವಾನಿಸಿದೇ ನೇರವಾಗಿ ಬ್ಯಾಂಕ್ಗೆ ತೆರಳಿ ತಮ್ಮ ಇ ಕೆವೈಸಿ ಅಪ್ಡೇಟ್ ಮಾಡಿಕೊಳ್ಳಬೇಕಿದೆ. ಆನ್ಲೈನ್ ಮೂಲಕವಾಗಿ ಯಾವುದೇ ಮಾಹಿತಿಗಳನ್ನು ಶೇರ್ ಮಾಡಿಕೊಳ್ಳಬಾರದು. ಇನ್ಸ್ಟಾಗ್ರಾಂ, ಫೇಸ್ಬುಕ್, ವಾಟ್ಸಾಪ್ ಜಾಲತಾಣಗಳನ್ನು ಬಳಸುವಾಗ ಎಚ್ಚರ ವಹಿಸ ಬೇಕು ಎಂದು ಕಾಪು ಎಸ್ಐ ಅಬ್ದುಲ್ ಖಾದರ್ ಜನರಲ್ಲಿ ಮನವಿ ಮಾಡಿದ್ದಾರೆ.
Udupi, fraudsters steal Rs 3 lakhs from canara bank after asking for OTP in the name of KYC update.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm