ಬ್ರೇಕಿಂಗ್ ನ್ಯೂಸ್
10-11-20 04:29 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ನ.10 : ಪೊಲೀಸರ ಕಿರುಕುಳದಿಂದ ಬೇಸತ್ತ ಕುಟುಂಬವೊಂದು ಇಬ್ಬರು ಮಕ್ಕಳೊಂದಿಗೆ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ನವೆಂಬರ್ 3 ರಂದು ಕರ್ನೂಲ್ನ ಪನ್ಯಂ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ಶೇಕ್ ಅಬ್ದುಲ್ ಸಲಾಮ್(45), ಪತ್ನಿ ನೂರ್ ಜಹಾನ್(43), ಮಗ ದಾದಾ ಖಲಂದರ್ (9), ಮತ್ತು ಮಗಳು ಸಲ್ಮಾ (14) ಎಂದು ಸಾವಿಗೆ ಶರಣಾದವರು. ಪೊಲೀಸರ ಕಿರುಕುಳ ಆರೋಪದ ನಂತರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ.
ಘಟನೆಗೇನು ಕಾರಣ?
ನಂದ್ಯಾಲ್ ಎಂಬಲ್ಲಿ ಆಭರಣದ ಅಂಗಡಿಯಲ್ಲಿ ಅಬ್ದುಲ್ ಸಲಾಮ್ ಕೆಲಸ ಮಾಡುತ್ತಿದ್ದರು. ಆಭರಣ ಕಳ್ಳತನದ ಆರೋಪವನ್ನು ಹೊರಿಸಿ ಕೆಲಸದಿಂದ ತೆಗೆದು ಹಾಕಿದ್ದು ಬಳಿಕ ಪೊಲೀಸರು ಶೇಕ್ ಅಬ್ದುಲ್ ಸಲಾಮ್ನನ್ನು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದ ಶೇಕ್, ಬಾಡಿಗೆ ಆಟೋ ಒಂದನ್ನು ಓಡಿಸುತ್ತಿದ್ದರು. ಆದರೆ, ಆಭರಣ ಅಂಗಡಿ ಮಾಲೀಕ ಮತ್ತು ಪೊಲೀಸರು ಪ್ರಕರಣದ ವಿಚಾರದಲ್ಲಿ ಕಿರುಕುಳ ಮುಂದುವರಿಸಿದ್ದರು. ಆಭರಣ ಕಳವು ಪ್ರಕರಣದಲ್ಲಿ ಶೇಕ್ ಅವರನ್ನು ಬಂಧಿಸಿ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಮನನೊಂದ ಶೇಕ್ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.

ನಂದ್ಯಾಲ್ ಐ ಟೌನ್ ಪೊಲೀಸರು ಸುಳ್ಳು ಪ್ರಕರಣ ರೂಪಿಸಿದ್ದಾರೆ. ರಕ್ಷಣೆಗೆ ಯಾರೂ ಬರದ ಕಾರಣ ಬುದುಕು ಮುಗಿಸುತ್ತಿದ್ದೇವೆ ಎಂದು ಹೇಳಿ ಕುಟುಂಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದೆ. ಕುಟುಂಬದ ಸಾವಿನ ನಂತರ ವಿಡಿಯೋ ವೈರಲ್ ಆಗಿದೆ. ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಮುಖ್ಯ ಪೇದೆಯನ್ನು ಬಂಧಿಸಲಾಗಿದೆ. ಸರ್ಕಲ್ ಇನ್ಸ್ ಪೆಕ್ಟರ್ ಸೋಮಶೇಖರ್ ರೆಡ್ಡಿ ಮತ್ತು ಮುಖ್ಯ ಕಾನ್ಸ್ಟೆಬಲ್ ಗಂಗಾಧರ್ ವಿರುದ್ಧ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) 323 ಮತ್ತು 324 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಮಗ್ರ ತನಿಖೆ ನಡೆಸುವಂತೆ ಆಂಧ್ರಪ್ರದೇಶದ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
Four members of a family from Visakhapatnam including two kids were found dead in a lodge under Dwaraka police station limits on Wednesday night in what appears to be a suicide pact. The deceased were identified as Bondam Applaraju (32), his wife Manasa (28), and children Keerthi (6) and Satwik (5).
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm