ಬ್ರೇಕಿಂಗ್ ನ್ಯೂಸ್
10-11-20 04:29 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ನ.10 : ಪೊಲೀಸರ ಕಿರುಕುಳದಿಂದ ಬೇಸತ್ತ ಕುಟುಂಬವೊಂದು ಇಬ್ಬರು ಮಕ್ಕಳೊಂದಿಗೆ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ನವೆಂಬರ್ 3 ರಂದು ಕರ್ನೂಲ್ನ ಪನ್ಯಂ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ಶೇಕ್ ಅಬ್ದುಲ್ ಸಲಾಮ್(45), ಪತ್ನಿ ನೂರ್ ಜಹಾನ್(43), ಮಗ ದಾದಾ ಖಲಂದರ್ (9), ಮತ್ತು ಮಗಳು ಸಲ್ಮಾ (14) ಎಂದು ಸಾವಿಗೆ ಶರಣಾದವರು. ಪೊಲೀಸರ ಕಿರುಕುಳ ಆರೋಪದ ನಂತರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ.
ಘಟನೆಗೇನು ಕಾರಣ?
ನಂದ್ಯಾಲ್ ಎಂಬಲ್ಲಿ ಆಭರಣದ ಅಂಗಡಿಯಲ್ಲಿ ಅಬ್ದುಲ್ ಸಲಾಮ್ ಕೆಲಸ ಮಾಡುತ್ತಿದ್ದರು. ಆಭರಣ ಕಳ್ಳತನದ ಆರೋಪವನ್ನು ಹೊರಿಸಿ ಕೆಲಸದಿಂದ ತೆಗೆದು ಹಾಕಿದ್ದು ಬಳಿಕ ಪೊಲೀಸರು ಶೇಕ್ ಅಬ್ದುಲ್ ಸಲಾಮ್ನನ್ನು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದ ಶೇಕ್, ಬಾಡಿಗೆ ಆಟೋ ಒಂದನ್ನು ಓಡಿಸುತ್ತಿದ್ದರು. ಆದರೆ, ಆಭರಣ ಅಂಗಡಿ ಮಾಲೀಕ ಮತ್ತು ಪೊಲೀಸರು ಪ್ರಕರಣದ ವಿಚಾರದಲ್ಲಿ ಕಿರುಕುಳ ಮುಂದುವರಿಸಿದ್ದರು. ಆಭರಣ ಕಳವು ಪ್ರಕರಣದಲ್ಲಿ ಶೇಕ್ ಅವರನ್ನು ಬಂಧಿಸಿ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಮನನೊಂದ ಶೇಕ್ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.

ನಂದ್ಯಾಲ್ ಐ ಟೌನ್ ಪೊಲೀಸರು ಸುಳ್ಳು ಪ್ರಕರಣ ರೂಪಿಸಿದ್ದಾರೆ. ರಕ್ಷಣೆಗೆ ಯಾರೂ ಬರದ ಕಾರಣ ಬುದುಕು ಮುಗಿಸುತ್ತಿದ್ದೇವೆ ಎಂದು ಹೇಳಿ ಕುಟುಂಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದೆ. ಕುಟುಂಬದ ಸಾವಿನ ನಂತರ ವಿಡಿಯೋ ವೈರಲ್ ಆಗಿದೆ. ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಮುಖ್ಯ ಪೇದೆಯನ್ನು ಬಂಧಿಸಲಾಗಿದೆ. ಸರ್ಕಲ್ ಇನ್ಸ್ ಪೆಕ್ಟರ್ ಸೋಮಶೇಖರ್ ರೆಡ್ಡಿ ಮತ್ತು ಮುಖ್ಯ ಕಾನ್ಸ್ಟೆಬಲ್ ಗಂಗಾಧರ್ ವಿರುದ್ಧ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) 323 ಮತ್ತು 324 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಮಗ್ರ ತನಿಖೆ ನಡೆಸುವಂತೆ ಆಂಧ್ರಪ್ರದೇಶದ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
Four members of a family from Visakhapatnam including two kids were found dead in a lodge under Dwaraka police station limits on Wednesday night in what appears to be a suicide pact. The deceased were identified as Bondam Applaraju (32), his wife Manasa (28), and children Keerthi (6) and Satwik (5).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am